Kornersite

Politics

ಕಾಂಗ್ರೆಸ್ ನಿಂದ 4ನೇ ಗ್ಯಾರಂಟಿ ಘೋಷಣೆ!

ಬೆಂಗಳೂರು : ಪದವಿ ಓದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿದೆ.
ಬೆಳಗಾವಿಯಲ್ಲಿ ನಡೆದ ಯುವಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಿದ್ದ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ನ ನಾಲ್ಕನೇ ಗ್ಯಾರಂಟಿ ಘೋಷಿಸಿದರು.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು ಪದವಿ ಓದಿದವರಿಗೆ ನಿರುದ್ಯೋಗ ಭತ್ಯೆಯಾಗಿ 3 ಸಾವಿರ ರೂ., ಡಿಪ್ಲೋಮಾ ಓದಿದವರಿಗೆ 1,500 ರೂ. ನೀಡಲಾಗುವುದು ಎಂದು ಕಾಂಗ್ರೆಸ್‌ ಯುವ ನಿಧಿ ಯೋಜನೆಯನ್ನು ಘೋಷಣೆ ಮಾಡಿತು.
ಈಗಾಗಲೇ ಕಾಂಗ್ರೆಸ್‌ ಮೂರು ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್‌ ವಿದ್ಯುತ್‌ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಕಾಂಗ್ರೆಸ್‌ ಈಗಾಗಲೇ ಘೋಷಣೆ ಮಾಡಿದೆ

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು