Kornersite

Crime

ಗುಂಡಿಕ್ಕಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ!

Durgapur: ಪಶ್ಚಿಮ ಬಂಗಾಳ(West Bengal)ದಲ್ಲಿ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದ್ದು, ಬಿಜೆಪಿ(BJP) ಮುಖಂಡನನ್ನು ಗುಂಡಿಕ್ಕಿ(Firing) ಹತ್ಯೆ ಮಾಡಲಾಗಿದೆ.
ಕಲ್ಲಿದ್ದಲು ವ್ಯಾಪಾರಿ ಹಾಗೂ ಬಿಜೆಪಿ ಮುಖಂಡನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಬಿಜೆಪಿ ಮುಖಂಡ ರಾಜೇಶ್ ಅಲಿಯಾಸ್ ರಾಜು ಝಾ ಎಂಬಾತನನ್ನೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ದುರ್ಗಾಪುರದ ಶಕ್ತಿಗಢದಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ರಾಜು ಝಾ ತಮ್ಮ ಕಾರಿನಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದಾಗ ಶಕ್ತಿಘಡದಲ್ಲಿ ಅವರ ಕಾರಿನ ಪಕ್ಕದಲ್ಲಿ ಮತ್ತೊಂದು ವಾಹನ ಬಂದು ನಿಂತಿದೆ. ಆಗ ಕಾರಿನೊಳಗಿದ್ದ ದುಷ್ಕರ್ಮಿಗಳು ರಾಜು ಝಾ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದಾರೆ. ಮೂರು ಗುಂಡುಗಳು ರಾಜು ದೇಹ ಹೊಕ್ಕಿದ್ದು, ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಬ್ರಾಟಿನ್ ಬ್ಯಾನರ್ಜಿ ಎಂಬುವವರು ಪರಾರಿಯಾಗಲು ಯತ್ನಿಸಿದಾಗ ಆತನಿಗೂ ಗುಂಡು ತಗುಲಿದೆ.
ಗಂಭೀರವಾಗಿ ಗಾಯಗೊಂಡಿರುವ ಬ್ಯಾನರ್ಜಿಯನ್ನು ಪೊಲೀಸರು ರಕ್ಷಿಸಿ, ಬುರ್ದ್ವಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾಜು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ, ಬ್ಯಾನರ್ಜಿ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡರಂಗದ ಆಡಳಿತದಲ್ಲಿ ಕಲ್ಲಿದ್ದಲು – ಬ್ಲ್ಯಾಕ್ ಡೀಲಿಂಗ್ ಸಿಂಡಿಕೇಟ್ ನ ಕಿಂಗ್ ಪಿನ್ ಆಗಿದ್ದ ರಾಜು ಝಾ ಅವರು ಕಡಿಮೆ ಅವಧಿಯಲ್ಲಿ ಹೆಚ್ಚಿನ ಆದಾಯ ಗಳಿಸಿದ್ದರು. ಸಾರಿಗೆ ವ್ಯವಹಾರದಿಂದ ಹೊಟೇಲ್ ಉದ್ಯಮದಲ್ಲಿಯೂ ಅವರು ತೊಡಗಿಕೊಂಡಿದ್ದರು. ಸದ್ಯ ಶಕ್ತಿಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ