Kornersite

Bengaluru Just In Karnataka State

Karnataka Assembly Election : ಸೋಮಣ್ಣ ಸೋಲಿಸಲು ರಣ ತಂತ್ರ ಹೆಣೆದ ಕಾಂಗ್ರೆಸ್!

Bangalore : ಸಚಿವ ವಿ.ಸೋಮಣ್ಣಗೆ(Somanna) ಬಿಜೆಪಿಯಿಂದ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ವರುಣಾದಲ್ಲಿ ಸಿದ್ದರಾಮಯ್ಯ (Siddaramaiah) ಅವರನ್ನು ಕಟ್ಟಿ ಹಾಕಲು ಸೋಮಣ್ಣಗೆ ಬಿಜೆಪಿ ಟಿಕೆಟ್‌ ನೀಡಲಾಗಿದೆ. ಅಲ್ಲದೇ, ಇದರೊಂದಿಗೆ ಅವರಿಗೆ ಚಾಮರಾಜನಗರದಲ್ಲಿಯೂ ಟಿಕೆಟ್ ನೀಡಲಾಗಿದೆ. ಈ ಬೆನ್ನಲ್ಲಿಯೇ ಚಾಮರಾಜನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ (Congress) ಪ್ಲ್ಯಾನ್‌ ಮಾಡಿದೆ.

ಸದ್ಯ ಬೆಂಗಳೂರಿನ ಗೋವಿಂದರಾಜನಗರದ ಶಾಸಕರಾಗಿರುವ ಸೋಮಣ್ಣ ಅವರಿಗೆ ಈ ಬಾರಿ ಬಿಜೆಪಿ ಹೈಕಮಾಂಡ್ ಚಾಮರಾಜನಗರ (Chamarajanagara) ಮತ್ತು ವರುಣಾದಲ್ಲಿ (Varuna) ಟಿಕೆಟ್‌ ನೀಡಿದೆ.

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧವೇ ಸೋಮಣ್ಣ ಕಣಕ್ಕೆ ಇಳಿಯುತ್ತಿರುವ ಕಾರಣ ಚಾಮರಾಜನಗರದಲ್ಲಿ ಸೋಮಣ್ಣ ಅವರನ್ನು ಕಟ್ಟಿ ಹಾಕಲು ಬಂಡಾಯ ಬಿಜೆಪಿ ನಾಯಕರನ್ನು ಕಾಂಗ್ರೆಸ್‌ ಸಂಪರ್ಕ ಮಾಡುತ್ತಿದೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ ಪುಟ್ಟರಂಗಶೆಟ್ಟಿ ಅವರಿಗೆ ಟಿಕೆಟ್‌ ನೀಡಿದೆ. ಈಗ ಬಿಜೆಪಿ ಟಿಕೆಟ್‌ ಬಯಸಿದ್ದ ನಾಯಕರನ್ನು ಸಿದ್ದರಾಮಯ್ಯ ತಂಡ ಸಂರ್ಪಕಿಸಿದೆ. ಬಂಡಾಯ ನಾಯಕರು ಎರಡು ದಿನ ಸಮಯ ಕೇಳಿದ್ದಾರೆ ಎನ್ನಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ