Kornersite

Bengaluru Just In Karnataka State

Karnataka Assembly Election: ಬಿಜೆಪಿಯ ಮತ್ತೊಂದು ವಿಕೆಟ್ ಢಮಾರ್; ಜೆಡಿಎಸ್ ಸೇರಲು ಮುಂದಾದ ನಾಗಮಾರಪಳ್ಳಿ

Bidar : ಬಿಜೆಪಿಯ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪಕ್ಷದಲ್ಲಿ ಭಿನ್ನಮತ ಸ್ಫೋಟವಾಗುತ್ತಲೇ ಇದೆ. ಈಗಾಗಲೇ ಹಲವು ಹಿರಿಯ ನಾಯಕರು ಬಿಜೆಪಿ ವಿರುದ್ಧ ಮುನಿಸಿಕೊಂಡು ಪಕ್ಷ ತೊರೆದಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಸೇರಿದಂತೆ ಹಲವರು ಪಕ್ಷ ತೊರೆದಿದ್ದಾರೆ. ಇದರ ಬೆನ್ನಲ್ಲಿಯೇ ಮತ್ತೊಬ್ಬ ಹಿರಿಯ ನಾಯಕ ಪಕ್ಷ ತೊರೆದಿದ್ದಾರೆ.


ಟಿಕೆಟ್‌ ಸಿಗದಕ್ಕೆ ಬಿಜೆಪಿ (BJP) ವಿರುದ್ಧ ಮುನಿಸಿಕೊಂಡಿರುವ ಹಾಲಿ ಶಾಸಕ ಸೂರ್ಯಕಾಂತ ನಾಗಮಾರಪಳ್ಳಿ (Suryakanth Nagamarapalli) ಪಕ್ಷ ತೊರೆದು ಜೆಡಿಎಸ್‌ ಸೇರಲು ಮುಂದಾಗಿದ್ದಾರೆ. ಅವರು ಈಗಾಗಲೇ ದಳ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಇಂದು ಅಥವಾ ಸೋಮವಾರ ಜೆಡಿಎಸ್‌ (JDS) ಸೇರುವ ಸಾಧ್ಯತೆಯಿದೆ. ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್‌ ಚಿಹ್ನೆಯ ಜೊತೆ ಸೂರ್ಯಕಾಂತ ಅವರ ಫೋಟೋಗಳನ್ನು ಅಭಿಮಾನಿಗಳು ಈಗಾಗಲೇ ಹಾಕುತ್ತಿದ್ದಾರೆ.


ಬೀದರ್‌ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಸಿಗದಿದ್ದಕ್ಕೆ ನಾಗಮಾರಪಳ್ಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆರಂಭದಲ್ಲಿ ನಾಗಮಾರಪಳ್ಳಿ ಮುಂದಾಗಿದ್ದರು. ಚೀಟಿ ಸಂಗ್ರಹದಲ್ಲಿ ಬಹುತೇಕ ಬೆಂಬಲಿಗರು ಜೆಡಿಎಸ್ ಸೇರಿ ಎಂದಿದ್ದರು. ಬೆಂಬಲಿಗರ ಅಭಿಪ್ರಾಯದಂತೆ ಸೂರ್ಯಕಾಂತ ನಾಗಮಾರಪಳ್ಳಿ ಜೆಡಿಎಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ಸಾಮಾನ್ಯ ಕಾರ್ಯಕರ್ತನಾಗಿ 35 ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಈಶ್ವರ್‌ ಸಿಂಗ್‌ ಅವರಿಗೆ ಈ ಬಾರಿ ಬಿಜೆಪಿ ಮಣೆ ಹಾಕಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ