Kornersite

Bengaluru Crime Just In Karnataka Sports

IPL 2023: ಆಟಗಾರನನ್ನೇ ಬೆಟ್ಟಿಂಗ್ ಗೆ ಸಹಾಯ ಮಾಡುವಂತೆ ಕೇಳಿದ ವ್ಯಕ್ತಿ!

ಭಾರತದಲ್ಲಿ ಬೆಟ್ಟಿಂಗ್ ಆಡುವುದನ್ನು ಬ್ಯಾನ್ ಮಾಡಲಾಗಿದೆ. ಆದರೂ ಸುಲಭವಾಗಿ ಬೆಟ್ಟಿಂಗ್ ಪ್ರಿಯರು ಯಾವ ಅಡ್ಡಿ ಆತಂಕವೂ ಇಲ್ಲದೇ ಬೆಟ್ಟಿಂಗ್ ಆಡಲು ಹಲವಾರು ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಲಭ್ಯವಿವೆ. ವಿಪರ್ಯಾಸವೆಂದರೆ ಭಾರತದ ಬಹುತೇಕ ಎಲ್ಲಾ ಸ್ಟಾರ್ ಪ್ಲೇಯರ್ಸ್ ಈ ಅಪ್ಲಿಕೇಶನ್‌ಗಳನ್ನು ಪ್ರಚಾರ ಕೂಡ ಮಾಡಿದ್ದಾರೆ. ಬೆಟ್ಟಿಂಗ್ ಚಟಕ್ಕೆ ಬಿದ್ದ ವ್ಯಕ್ತಿಯೋರ್ವ ಸಾಲು ಸಾಲು ಸೋಲು ಕಂಡ ಬಳಿಕ ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಯೋಜನೆ ಹಾಕಿಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಮೊಹಮ್ಮದ್ ಸಿರಾಜ್ ಬಳಿ ಸಲಹೆ ಕೇಳಿದ್ದಾನೆ.

ಡ್ರೈವರ್ ವೃತ್ತಿಯನ್ನು ಮಾಡಿ ಬದುಕುತ್ತಿದ್ದ ವ್ಯಕ್ತಿಯೊಬ್ಬ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡ ಕಾರಣ ತನಗೆ ಸಹಾಯ ಕೋರಿ ಮೊಹಮ್ಮದ್ ಸಿರಾಜ್‌ಗೆ ವಾಟ್ಸಪ್ ಮೂಲಕ ಸಂದೇಶ ಕೇಳಿದ್ದಾನೆ.

ಟೂರ್ನಿಯ ಒಳಗೆ ಏನೆಲ್ಲಾ ನಡೆಯುತ್ತೆ, ತಂಡದೊಳಗಿನ ಮಾಹಿತಿಯನ್ನು ಹಂಚಿಕೊಳ್ಳುವಂತೆ ಮೊಹಮ್ಮದ್ ಸಿರಾಜ್ ಬಳಿ ಆತ ಮನವಿ ಮಾಡಿದ್ದಾನೆ. ಈ ಸಂದೇಶ ನೋಡಿದ ಕೂಡಲೇ ಮೊಹಮ್ಮದ್ ಸಿರಾಜ್ ಬಿಸಿಸಿಐ ಆಂಟಿ ಕರಪ್ಷನ್ ಬೋರ್ಡ್‌ಗೆ ದೂರು ನೀಡಿದ್ದಾರೆ. ಈ ಮೂಲಕ ಬೆಟ್ಟಿಂಗ್‌ನಲ್ಲಿ ಗೆಲ್ಲಲು ಸಲಹೆ ಕೇಳಿ ಮೊಹಮ್ಮದ್ ಸಿರಾಜ್‌ಗೆ ವಾಟ್ಸಪ್ ಸಂದೇಶ ಕಳುಹಿಸಿದ ವ್ಯಕ್ತಿ ಪೊಲೀಸರ ಅತಿಥಿಯಾಗುವುದು ಖಚಿತ ಎನ್ನಲಾಗಿದೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.