Kornersite

Bengaluru Just In Karnataka Politics State

Karnataka Assembly Election: ಆರ್. ಅಶೋಕ್ ಗೆ ಚೆಕ್ ಮೇಟ್ ಕೊಡಲು ಸಿದ್ಧತೆ! ಪದ್ಮನಾಭನಗರಕ್ಕೆ ಕಾಂಗ್ರೆಸ್ ನಿಂದ ಪ್ರಭಲ ಅಭ್ಯರ್ಥಿ!

Bangalore : ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಎರಡೇ ದಿನ ಬಾಕಿ ಉಳಿದಿವೆ. ಇದರ ಮಧ್ಯೆ ಇನ್ನೂ ತಂತ್ರ- ಪ್ರತಿತಂತ್ರ ನಡೆಯುತ್ತಲೇ ಇವೆ. ಪದ್ಮನಾಭನಗರದ (Padmanabhanagar) ಕಾಂಗ್ರೆಸ್‌ (Congress) ಅಭ್ಯರ್ಥಿ ಯಾರು ಎಂಬುವುದೇ ಇನ್ನೂ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ.


ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು (Raghunath Naidu) ಅವರಿಗೆ ಫಾರಂ ಬಿ (Form B) ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು, ಹಾಲಿ ಶಾಸಕ ಅಶೋಕ್‌ಗೆ (Ashok) ಠಕ್ಕರ್‌ ನೀಡುವುದಕ್ಕಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್‌ (DK Suresh) ಅವರನ್ನು ಕಣಕ್ಕೆ ಇಳಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.


ಕನಕಪುರದಲ್ಲಿ ಬಿಜೆಪಿ (BJP) ಪಕ್ಷವು ಡಿಕೆ ಶಿವಕುಮಾರ್‌ (DK Shivakumar) ವಿರುದ್ಧ ಅಶೋಕ್‌ ಅವರನ್ನು ಕಣಕ್ಕೆ ಇಳಿಸಿದೆ. ರಾಮನಗರದಲ್ಲಿ ಸಂಘಟನೆ ದೃಷ್ಟಿಯಿಂದ ಬಲಿಷ್ಠ ಅಭ್ಯರ್ಥಿ ಹಾಕಿದರೆ ಮುಂದೆ ಬಿಜೆಪಿಗೆ ಆಗಬಹುದು ಎಂಬ ಕಾರಣಕ್ಕೆ ಇಳಿಸಿದೆ.
ಪದ್ಮನಾಭನಗರದ ಅಭ್ಯರ್ಥಿ ರಘುನಾಥ್ ನಾಯ್ಡು ಡಿ.ಕೆ.ಸುರೇಶ್ ಬಂದು ಸ್ಪರ್ಧೆ ಮಾಡಿದರೆ ನಾನು ಸ್ಥಾನ ಹಿಂದೆ ಸರಿಯಲು ಸಿದ್ಧ ಎಂದು ಹೇಳಿದ್ದಾರೆ. ಹೀಗಾಗಿ ಸಂಸದ ಡಿ.ಕೆ. ಸುರೇಶ್ ಪದ್ಮನಾಭನಗರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಪದ್ಮನಾಭನಗರ ಸ್ಪರ್ಧೆಗೆ ಸಂಬಂಧಿಸಿದಂತೆ ಎದ್ದಿರುವ ಊಹಾಪೋಹಗಳಿಗೆ ಇಂದು ತೆರೆ ಬೀಳುವ ಸಾಧ್ಯತೆ ಇದೆ.


ಅಶೋಕ್‌ ಅವರನ್ನು ಕನಕಪುರದಲ್ಲಿ ಕಣಕ್ಕೆ ಇಳಿಸಿದ ಬೆನ್ನಲ್ಲಿಯೇ ಪದ್ಮನಾಭನಗರದಲ್ಲಿ ಅಶೋಕ್‌ಗೆ ಠಕ್ಕರ್‌ ನೀಡಲು ಡಿ.ಕೆ. ಸುರೇಶ್‌ ಅವರನ್ನು ಇಳಿಸಲಾಗುತ್ತದೆ ಎಂಬ ವದಂತಿ ಕೇಳಿ ಬಂದಿತ್ತು. ಈ ಮಾತಿಗೆ ಆರಂಭದಲ್ಲಿ ಡಿಕೆ ಸುರೇಶ್‌, ನಾನು ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ. ಲೋಕಸಭಾ ಸದಸ್ಯನಾಗಿ ಇರುತ್ತೇನೆ ಎಂದು ಹೇಳಿದ್ದರು. ಸದ್ಯ ಮತ್ತೆ ಅವರ ಸ್ಪರ್ಧೆ ಕುರಿತು ಮಾತುಗಳು ಕೇಳಿ ಬರುತ್ತಿದ್ದು, ಏನಾಗುತ್ತದೆಯೋ ಕಾಯ್ದು ನೋಡಬೇಕಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು