Kornersite

Bengaluru Just In Karnataka Sports

IPL 2023: ರಾಜಸ್ಥಾನ್ ರಾಯಲ್ಸ್ ಎದುರು RCBಗೆ ರೋಚಕ ಜಯ-ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ RCB

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ಎದುರು ರೋಚಕ ಜಯ ಗಳಿಸಿದೆ. ವಿರಾಟ್ ಕೋಹ್ಲಿ ನೇತೃತ್ವದಲ್ಲಿ ಆರ್ ಸಿಬಿ ತಂಡ ಎರಡು ಬಾರಿ ಗೆಲುವು ಸಾಧಿಸುವ ಮೂಲಕ್ ಅಂಕಪಟ್ಟಿಯಲ್ಲಿ 5ನೇ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ190 ರನ್ ಗಳ ಸವಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಖಾತೆ ತೆರೆಯುವ ಮುನ್ನವೇ ಸಿರಾಜ್ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆದರು. ಆದರೆ ಎರಡನೇ ವಿಕೆಟ್ ಗೆ ದೇವದತ್ ಪಡಿಕ್ಕಲ್ ಹಾಗೂ ಜೈಸ್ವಾಲ್ ಎರಡನೇ ವಿಕೆಟ್ ಗೆ 98 ರನ್ ಗಳ ಜತೆಯಾಟವಾಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಆಕರ್ಷಕ ಬ್ಯಾಟಿಂಗ್ ನಡೆಸಿದ ದೇವದತ್ ಪಡಿಕ್ಕಲ್ ಕೇವಲ್ 34 ಎಸೆತಗಳನ್ನು ಎದುರಿಸಿ 7 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿ 52 ರನ್ ಪಡೆದಿದ್ದಾರೆ. ಕೊನೆಯ ೫ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಗೆಲ್ಲಲು 69 ರನ್ ಗಳ ಅಗತ್ಯವಿತ್ತು. ನಾಯಕ ಸಂಜು 22 ರನ್ ಬಾರಿಸಿ ಹರ್ಶಲ್ ಪಟೇಲ್ ಗೆ ಎರಡನೇ ಬಲಿಯಾದರು. ಕೊನೆಯಲ್ಲಿ ಕೇವಲ 16 ಎಸೆತಗಳಲ್ಲಿ ಅಜೇಯ 34 ರನ್ ಗಳಿಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.

ಕೊನೆಯ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲ್ಲಲು 20 ರನ್ ಗಳ ಅಗತ್ಯವಿತ್ತು. 20ನೇ ಓವರ್ ಬೌಲಿಂಗ್ ಮಾಡುವ ಜವಾಬ್ದಾರಿ ಹೊತ್ತ ಆರ್ ಸಿಬಿ ಡೆತ್ ಓವರ್ ಸ್ಪೆಷಲಿಸ್ಟ್ ಹರ್ಶಲ್ ಪಟೇಲ್ ಒಂದು ವಿಕೆಟ್ ಕಬಳಿಸಿ ಕೇವಲ 12 ರನ್ ನೀಡುವ ಮೂಲಕ್ ತಂಡಕ್ಕೆ ರೋಚಕ ಜಯ ತಂದುಕೊಟ್ತಿದ್ದಾರೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.