Mysore : ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಸಿದ್ದರಾಮನಹುಂಡಿಯಲ್ಲಿ ಪ್ರಚಾರದ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ (BJP) ಪ್ರಚಾರ ರಥದ ಮೇಲೆ ಕಾಂಗ್ರೆಸ್ (Congress) ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಸಿದ್ದರಾಮಯ್ಯ (Siddaramaiah) ಅವರ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವ ಸಂದರ್ಭದಲ್ಲಿ ಈಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪವಿದ್ದು, ಘಟನೆಗೆ ಸಂಬಂಧಿಸಿ ನಾಗೇಶ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

ಪ್ರಚಾರಕ್ಕಾಗಿ ಬಿಜೆಪಿ ನಾಯಕರು ಸಿದ್ದರಾಮಯ್ಯನಹುಂಡಿಗೆ ತೆರಳುತ್ತಿದ್ದಂತೆ ಸ್ಥಳೀಯರು ಕಿರಿಕಿರಿ ಮಾಡಿದ್ದಾರೆ. ಗ್ರಾಮಕ್ಕೆ ಬಿಜೆಪಿ ನಾಯಕರು ಎಂಟ್ರಿ ಆಗುತ್ತಿದ್ದ ಕಾರುಗಳನ್ನು ತಡೆದು ಗಲಾಟೆ ನಡೆಸಿದ್ದಾರೆ. ಈ ವೇಳೆ ಕಾರಿನಿಂದ ಇಳಿದು ಯುವಕ ನಾಗೇಶ್ ಪ್ರಶ್ನೆ ಮಾಡಿದ್ದಾನೆ. ನಾಗೇಶ್ ಪ್ರಶ್ನೆ ಮಾಡುತ್ತಿದ್ದಂತೆ 30ಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಚಾರ ರಥದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ (V Somanna), ಸಂಸದ ಪ್ರತಾಪ್ ಸಿಂಹ (Pratap Simha) ಇದ್ದು, ಅವರು ಪಾರಾಗಿದ್ದಾರೆ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.