Kornersite

Just In Karnataka Politics State

Breaking News: ಸಿದ್ದರಾಮಯ್ಯ ಅವರ ಸಹೋದರನ ಮನೆಯ ಮುಂದೆ ಗಲಾಟೆ ನಡೆಯಿತು- ಸೋಮಣ್ಣ

Mysore : ವರುಣಾ(Varuna) ವಿಧಾನಸಭಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್‌ (Congress) ಹಾಗೂ ಬಿಜೆಪಿ (BJP) ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಕ್ಕೆ ಸಂಬಂಧಿಸಿದಂತೆ ವಿ.ಸೋಮಣ್ಣ (V.Somanna) ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ (Siddaramaiah) ಅವರ ಅಣ್ಣನ ಮನೆಯ ಎದುರೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ವಿ.ಸೋಮಣ್ಣ ಅವರು ಆಸ್ಪತ್ರೆಗೆ ತೆರಳಿ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಣ್ಣನ‌ ಮನೆ ಮುಂದೆಯೇ ಈ ಗಲಾಟೆ ನಡೆಯಿತು. ಹತಾಶೆ ಮನೋಭಾವ ಹಾಗೂ ಸೋಲಿನ ಭಯದಿಂದಾಗಿ ಈ ಕೆಲಸ ಮಾಡಿದ್ದಾರೆ. ಎಲ್ಲ ಕೋಮಿನ ಜನ ಪ್ರೀತಿ ಮಾಡುತ್ತಾರೆ. ಒಂದು ಕೋಮಿನ‌‌ ಜನ ಮಾತ್ರ ದ್ವೇಷ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.


ನಮ್ಮ ಕಾರ್ಯಕರ್ತನಿಗೆ ಆದ ನೋವು ಸಿದ್ದರಾಮಯ್ಯರ ಅಣ್ಣನ ಮಗನಿಗೆ ಆಗಿದ್ದರೆ ನನ್ನನ್ನು ಯಾವ ದೃಷ್ಟಿಯಲ್ಲಿ ಸಿದ್ದರಾಮಯ್ಯ ನೋಡ್ತಿದ್ದರು? ಸಿದ್ದರಾಮಯ್ಯ ಘನತೆಗೆ ಇದು ಒಳ್ಳೆಯದಲ್ಲ. ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ನಾನು ಯಾವತ್ತಿಗೂ ವಿಚಲಿತ ಆಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು