Kornersite

Crime Just In Karnataka State

Crime News: ಕ್ಷುಲ್ಲಕ ಕಾರಣಕ್ಕೆ ಅತ್ತಿಗೆ, ಮಗನನ್ನು ಕೊಲೆ ಮಾಡಿದ ಪಾಪಿ!

ಕ್ಷುಲ್ಲಕ ಕಾರಣಕ್ಕೆ ಮಂಡ್ಯ ಜಿಲ್ಲೆಯ ಪಾಂಡವಪುರ(Pandavapura) ತಾಲುಕಿನ ಹೆಗಡಹಳ್ಳಿ ಭೀಕರವಾಗಿ ಜೋಡಿ ಕೊಲೆ ನಡೆದಿರುವ ಘಟನೆ ನಡೆದಿದೆ.

ಶಾಂತಮ್ಮ ಹಾಗೂ ಯಶವಂತ್ ಎಂಬುವವರು ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಗದ್ದೆ ಬಳಿ ಬಂದ ಮೈದುನ ಸತೀಶ್ ಎಂಬಾತ ನೀರಿನ ವಿಚಾರಕ್ಕೆ ಕಿರಿಕ್ ಮಾಡಿಕೊಂಡಿದ್ದಾನೆ. ಶಾಂತಮ್ಮ ಹಾಗೂ ಸತೀಶ್ನಿಗೂ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ರೊಚ್ಚಿಗೆದ್ದ ಸತೀಶ ಮಿಷನ್ ಮನೆಯಲ್ಲಿದ್ದ ಕುಡುಗೋಲು ತೆಗೆದುಕೊಂಡು ಬಂದು ಏಕಾಏಕಿ ದಾಳಿ ಮಾಡಿದ್ದಾನೆ.

ಶಾಂತಮ್ಮಳ ತಲೆ ಎದೆ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾನೆ. ಕುಡುಗೋಲಿನ ಏಟಿಗೆ ಶಾಂತಮ್ಮ ಅರಚಾಡುತ್ತ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಅಮ್ಮನ ಚೀರಾಟ, ಕೂಗಾಟ ಕೇಳಿದ ಮಗ ಯಶವಂತ್ ಓಡೋಡಿ ಬಂದು, ತಾಯಿ ಸಹಾಯಕ್ಕೆ ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಯಶವಂತ್ ಮೇಲೆಯೂ ದಾಳಿ ನಡೆಸಿದ ಸತೀಶ ಆತನನ್ನು ಕೊಚ್ಚಿ ಕೊಂದಿದ್ದಾನೆ.

ಕೊಲೆ ಮಾಡಿದ ಬಳಿಕ ಸಿದಾ ಮನೆಗೆ ಬಂದ ಸತೀಶ ಸ್ನಾನ ಮಾಡಿದ್ದಾನೆ. ತನ್ನ ಹೆಂಡತಿ ಮಕ್ಕಳನ್ನ ತವರು ಮನೆಗೆ ಕಳುಹಿಸಿದ್ದಾನೆ. ನಂತರ ನೇರವಾಗಿ ಪಾಂಡವಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪಾಂಡವಪುರ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ