ನಟ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ 2’ (Kantara 2) ಸಿದ್ಧತೆಯ ಮಧ್ಯೆಯೇ ಪಂಜುರ್ಲಿ ದೈವದ ಆಶೀರ್ವಾದ ಪಡೆದಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಿಷಬ್ ಶೆಟ್ಟಿ ಅವರು ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಸಾಕಷ್ಟು ಹೆಸರು ಮಾಡಿತ್ತು. ನಟನೆಯ ಜೊತೆ ನಿರ್ದೇಶನ ಮಾಡಿ ರಿಷಬ್ ಶೆಟ್ಟಿ ಸೈ ಎನಿಸಿಕೊಂಡಿದ್ದರು. ಪಂಜುರ್ಲಿ ದೈವದ ಕಥೆ ಅದ್ಭುತವಾಗಿ ನಿರ್ದೇಶಿಸಿ, ನಟಿಸಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಮುತ್ತೂರು ನೆಟ್ಟಿಲ ಪಂಜುರ್ಲಿ (Panjurli) ದೈವ ನೇಮೋತ್ಸವದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ರಿಷಬ್ ಅವರು ಪಂಜುರ್ಲಿ ದೈವದ ಆಶೀರ್ವಾದ ಪಡೆದಿದ್ದಾರೆ. ‘ಕಾಂತಾರ’ ಸಿನಿಮಾದಲ್ಲಿ ನಟ ರಿಷಬ್ ದೈವದ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾದ ಯಶಸ್ವಿ ನಂತರ ಅವರು ದೈವದ ಬಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಿಷಬ್ ಶೇರ್ ಮಾಡಿರುವ ಮುತ್ತೂರು ನೆಟ್ಟಿಲ ‘ಪಂಜುರ್ಲಿ’ ಕೋಲದ ವೀಡಿಯೋ ಭರ್ಜರಿ ಲೈಕ್ಸ್ ಗಿಟ್ಟಿಸಿಕೊಳ್ಳುತ್ತಿದೆ. ಈ ವೀಡಿಯೋ ವೈರಲ್ ಆಗ್ತಿದ್ದಂತೆ ‘ಕಾಂತಾರ 2’ (Kantara 2) ಸಿನಿಮಾ ಬಗ್ಗೆ ಫ್ಯಾನ್ಸ್ ಅಪ್ಡೇಟ್ ಕೇಳಿದ್ದಾರೆ.

