Kornersite

Bengaluru Crime Just In Karnataka State

Crime News: ಮನೆ ಕುಸಿತ; ವೃದ್ಧೆ, 20 ದಿನಗಳ ಹಸುಗೂಸು ಸಾವು!

Koppal : ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಹಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ.

ಮಳೆಯ ಅವಾಂತರಕ್ಕೆ ಜಿಲ್ಲೆಯ ಕನಕಗಿರಿ (Kanakagiri) ತಾಲೂಕಿನ‌ ಜೀರಾಳದಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸೇರಿದಂತೆ 20 ದಿನಗಳ ಹಸುಗೂಸು ಸಾವನ್ನಪ್ಪಿದ್ದಾರೆ. ಫಕೀರಮ್ಮ(60), 20 ದಿನದ ಹೆಣ್ಣು ಮಗು ಸಾವನ್ನಪ್ಪಿದ ದುರ್ದೈವಿಗಳು. ಘಟನೆಯಲ್ಲಿ ಬಾಣಾಂತಿ ಕನಕಮ್ಮಳಿಗೆ ಗಾಯಗಳಾಗಿದ್ದು ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಅಲ್ಲದೇ, ಘಟನೆಯಲ್ಲಿ ಕನಕಮ್ಮಳ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡೂ ದಿನಗಳ ಹಿಂದೆ ಸುರಿದ ಮಳೆಗೆ ಮನೆ ಶಿಥಿಲಗೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ