Kornersite

Entertainment Gossip Just In Mix Masala

ಶೂಟಿಂಗ್ ವೇಳೆ ಚಿಯಾನ್ ವಿಕ್ರಮ್ ಗೆ ಗಾಯ: ಒಂದು ತಿಂಗಳು ವಿಶ್ರಾಂತಿಗೆ ಸೂಚನೆ

ಶೂಟಿಂಗ್ ವೇಳೆ ನಟ ಚಿಯಾನ್ ವಿಕ್ರಮ್ ಗೆ ಗಾಯಗೊಂಡಿದ್ದಾರೆ. ‘ತಂಗಲಾನ್’ ಶೂಟಿಂಗ್ ಸ್ಥಗಿತಗೊಂಡಿದೆ. ವೈದ್ಯರು ವಿಕ್ರಮ್ ಗೆ ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ತಿಳಿಸಿದ್ದಾರೆ.

ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ಗಾಯಗೊಂಡಿದ್ದಾರೆ. ಪಕ್ಕೆಲುಬಿಗೆ ಏಟು ಬಿದ್ದಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಕ್ರಮ್ ಗೆ ಗಾಯವಾಗಿದ್ದರಿಂದ ಸಿನಿಮಾದ ಶೂಟಿಂಗ್ ಸ್ಥಗಿತಗೊಂಡಿದೆ. ಒಂದು ತಿಂಗಳಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.

‘ತಂಗಲಾನ್’ ಸಿನಿಮಾಗೆ ಸಿಕ್ಕಾಪಟ್ಟೆ ತಯಾರಿ ನಡೆಸಿದ್ದಾರೆ ವಿಕ್ರಮ್. ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿರುವ ಚಿಯಾನ್ ಪಾತ್ರಕ್ಕಾಗಿ ಪೂರ್ವಾಭ್ಯಾಸ ಮಾಡುತ್ತಿದ್ದರು. ಆದರೆ ಈಗ ರಿಹರ್ಸಲ್ ವೇಳೆ ಗಾಯಗೊಂಡಿದ್ದಾರೆ. ಈ ಬಗ್ಗೆ ಚಿಯಾನ್ ವಿಕ್ರಮ್ ಟೀಂ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ‘ಆದಿತ್ಯಾ ಕರಿಕಾಳನ್ ಚಿಯಾನ್ ವಿಕ್ರಮ್ ಸ್ವೀಕರಿಸಿದ ಪ್ರೀತಿ ಮತ್ತು ಮೆಚ್ಚುಗೆಗೆ ಧನ್ಯವಾದಗಳು. ಜಗತ್ತಿನಾದ್ಯಂತ ಪೊನ್ನಿಯನ್ ಸೆಲ್ವನ್-೨ ಸಿನಿಮಾಗೆ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಿಹರ್ಸಲ್ ಸಮಯದಲ್ಲಿ ಚಿಯಾನ್ ವಿಕ್ರಮ್ ಗಾಯಗೊಂಡಿದ್ದು, ಪಕ್ಕೆಲುಬು ಮುರಿದಿದೆ. ತಂಗಲಾನ್ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ನಿಮ್ಮ ಪ್ರೀತಿಗೆ ಧನ್ಯವಾದಗಳು. ಬೇಗನೇ ಹಿಂದಿರುಗುತ್ತಾರೆ’ ಎಮ್ದು ಹೇಳಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ