Kornersite

Bengaluru Just In Karnataka Politics State

Karnataka Assembly Election: ರಾಜ್ಯ ರಾಜಧಾನಿಯಲ್ಲಿ 2ನೇ ದಿನವೂ ಪ್ರಧಾನಿ ಹವಾ!

Bangalore : ಪ್ರಧಾನಿ ನರೇಂದ್ರ ಮೋದಿ ಅವರ ಹವಾ ರಾಜ್ಯ ರಾಜಧಾನಿಯಲ್ಲಿ (Bengaluru) 2ನೇ ದಿನವೂ ಮುಂದುವರೆದಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 8 ಕಿ.ಮೀವರೆಗೆ ಸಾಗಲಿದೆ.

ನಗರದ ನ್ಯೂ ತಿಪ್ಪಸಂದ್ರದಿಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರೋಡ್ ಶೋ (Road Show) ಆರಂಭವಾಗಿದ್ದು, ಈ ರೋಡ್ ಶೋ, ಮಹಾದೇವಪುರ, ಕೆ.ಆರ್. ಪುರಂ, ಸಿ.ವಿ. ರಾಮನ್ ನಗರ, ಸರ್ವಜ್ಞ ನಗರ, ಶಿವಾಜಿನಗರ, ಶಾಂತಿನಗರ ಕ್ಷೇತ್ರಗಳಲ್ಲಿ ಸಾಗುತ್ತಿದೆ. ತಿಪ್ಪಸಂದ್ರ ಹತ್ತಿರದ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡ ಪ್ರತಿಮೆಗೆ ನಮಸ್ಕರಿಸಿ ರೋಡ್ ಶೋ ನಡೆಸಿದ್ದಾರೆ.
ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ನಡೆಸುದ್ದಿದ್ದು, ಸಾವಿರಾರು ಸಂಖ್ಯೆಯಲ್ಲಿ ಮೋದಿ ಕೈ ಬೀಸಿ ಕರೆಯುತ್ತಿದ್ದಾರೆ.

ಪ್ರಧಾನಿ ಅವರನ್ನು ಸ್ವಾಗತಿಸಲು ಜನರು ಮಳೆಯನ್ನೂ ಲೆಕ್ಕಿಸದೆ ನಿಂತಿದ್ದಾರೆ. ರಸ್ತೆಯುದ್ದಕ್ಕೂ ಸಾವಿರಾರು ಜನರು ಸೇರಿ ಮೋದಿಯನ್ನು ನೋಡಿ ಸಂತಸ ಪಡುತ್ತಿದ್ದಾರೆ. ರಸ್ತೆಯುದ್ದಕ್ಕೂ ಕೇಸರಿ ಬಾವುಟ ಹಾರಾಡುತ್ತಿದೆ. ಅಲ್ಲದೇ, ಶೋನಲ್ಲಿ ಕಲಾ ತಂಡಗಳ ಮೆರಗು ಹೆಚ್ಚಾಗಿದೆ. ಪ್ರಧಾನಿ ಅವರು ಜನರತ್ತ ಕೈ ಬೀಸುತ್ತಿದ್ದರೆ, ತಮ್ಮ ನೆಚ್ಚಿನ ನಾಯಕನಿಗೆ ಜನರು ಹೂಮಳೆ ಸುರಿಸುತ್ತಿದ್ದಾರೆ. ಮೋದಿ ಮೋದಿ ಎಂದು ಜೈಕಾರ ಹಾಕುತ್ತಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು