Kornersite

Bengaluru Just In Karnataka Politics State

Karnataka Assembly Election: ನೀವು ಬಿಟ್ಟರೂ 40 ಪರ್ಸೆಂಟ್ ಕರ್ಮ ನಿಮ್ಮನ್ನು ಬಿಡುವುದಿಲ್ಲ ಎಂದು ಕಾಲೆಳೆದ ಸಿದ್ದರಾಮಯ್ಯ!

Bangalore : ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಬೆಂಗಳೂರಿನ (Bengaluru) 11 ವಿಧಾನಸಭಾ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ(Road Show) ನಡೆಸಿದ್ದಾರೆ.

ರೋಡ್ ಶೋ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೋವನ್ನು ಬಿಜೆಪಿ ವೈರಲ್ ಮಾಡಿದೆ. ಆದರೆ, ಈ ಫೋಟೋವೊಂದರಲ್ಲ ಮಳಿಗೆಯ ಮೇಲೆ 40% ಆಫರ್‌ ಇರುವ ಪೋಸ್ಟರ್‌ ಕಂಡು ಬಂದಿದೆ. ಹೀಗಿಗ ಈ ಫೋಟೋವನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ (Siddaramaiah) ಅವರು ʻನೀವು ಬಿಟ್ಟರೂ 40% ಕರ್ಮ ನಿಮ್ಮನ್ನು ಬಿಡದೆ ಹಿಂಬಾಲಿಸುತ್ತಿದೆ ಮೋದಿಜೀ ಎದು ಬರೆದು ಕಾಲೆಳೆದಿದ್ದಾರೆ.
ಅಲ್ಲದೇ, ಕನ್ನಡಿಗರ ಮತಕ್ಕಿರುವ ಬೆಲೆ ಬದುಕಿಗಿಲ್ಲವೇ? ಘೋಷಣೆಯೊಂದಿಗೆ ಹಲವು ಪ್ರಶ್ನೆಗಳನ್ನು ಪ್ರಧಾನಿ ಮೋದಿ ಅವರಿಗೆ ಕೇಳಿದ್ದಾರೆ. ಗ್ರಾಮೀಣ ಬ್ಯಾಂಕಿಂಗ್‌, ಐಬಿಪಿಎಸ್‌, ಕೇಂದ್ರ ಸ್ವಾಮ್ಯದ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ನಿರಾಕರಿಸಿ ಹುಟ್ಟಿದ ನೆಲದಲ್ಲಿಯೇ ಕನ್ನಡಿಗ ಯುವ ಜನರಿಗೆ ಉದ್ಯೋಗ ವಂಚನೆ ಮಾಡಲಾಗಿದೆ. ಪ್ರತಿಭಟನೆ ನಡೆಸುವಾಗ ನ್ಯಾಯ ಕೊಡಿಸಲು ನೀವು ಯಾಕೆ ಬಂದಿರಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಕಳೆದ 4 ಬಜೆಟ್‌ಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಲಾಗುವ ಅನುದಾನ ಶೇ.1.97ಕ್ಕಿಂತ ಮೇಲೆ ಏರಿಲ್ಲ. 2022ರಲ್ಲಿ ಸಿಎಜಿ ವರದಿ ಪ್ರಕಾರ 2022ರಲ್ಲಿ 1.62 ಲಕ್ಷ ವಿದ್ಯಾರ್ಥಿಗಳು ಶಾಲೆಗಳನ್ನ ತ್ಯಜಿಸಿದ್ದಾರೆ. 2020-21 ಮತ್ತು 2021-22ರ ಅವಧಿಯಲ್ಲಿ 1,965 ಸರ್ಕಾರಿ ಶಾಲೆಗಳನ್ನ ಮುಚ್ಚಲಾಗಿದೆ. ಶಿಕ್ಷಣವಂಚಿತ ಮಕ್ಕಳ ಭವಿಷ್ಯ ಹಾಳಾಗುವಾಗ ನ್ಯಾಯ ಕೊಡಿಸಲು ನೀವು ಏಕೆ ಬಂದಿರಲಿಲ್ಲ? ಸೇರಿದಂತೆ ಹಲವು ಪ್ರಶ್ನೆಗಳನ್ನು ಮೋದಿ ಮುಂದೆ ಇಟ್ಟಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು