Kornersite

Bengaluru Just In Karnataka Politics State

Karnataka Assembly Election: ಎರಡು ದಿನ ಸುದ್ದಿ ಪ್ರಸಾರಕ್ಕೆ ತಡೆ!

Bangalore : ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ತೀವ್ರ ಕುತೂಹಲ ಕೆರಳಿಸಿದೆ.

ನಾವಣೆಗೆ ಇನ್ನೂ ಕೇವಲ 3 ದಿನಗಳು ಮಾತ್ರ ಬಾಕಿ ಉಳಿದಿವೆ. ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹೀಗಗಿ ಮೇ 9 ಮತ್ತು 10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ ಹಾಗೂ ಜಾಹೀರಾತು ನಿರ್ಬಂಧಿಸುವ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಪ್ರಕಟಣೆ ಹೊರಡಿಸಲಾಗಿದೆ.

ಚುನಾವಣೆಯ ದಿನದ ಒಂದು ದಿನ ಮೊದಲು ಮತ್ತು ಮತದಾನದ ದಿನದಂದು ಪ್ರಕಟಿಸಲು MCMC ಸಮಿತಿಯಿಂದ ಪೂರ್ವ-ಪ್ರಮಾಣೀಕರಣ ಪಡೆದು ಪ್ರಕಟಿಸಬಹುದಾಗಿದೆ. ಮತದಾನದ 48 ಗಂಟೆಗಳ ಮೊದಲು ಮಾಧ್ಯಮಗಳಲ್ಲಿ ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 120ರ ಪ್ರಕಾರ ನಿಷೇಧಿಸಲಾಗಿದೆ. ಚುನಾವಣಾ ವಿಷಯಕ್ಕೆ ಸಂಬಂಧಿಸಿದಂತೆ ಎಂದರೆ ಚುನಾವಣೆಯ ಫಲಿತಾಂಶದ ಮೇಲೆ ಪುಭಾವ ಬೀರಲು ಅಥವಾ ಪರಿಣಾಮ ಬೀರಲು ಉದ್ದೇಶಿಸಿರುವ ಅಥವಾ ಲೆಕ್ಕಹಾಕಿದ ಯಾವುದೇ ವಿಷಯವಾಗಿರುತ್ತದೆ.

ಟಿವಿ, ರೇಡಿಯೋ ಚಾನೆಲ್‌ಗಳು, ಕೇಬಲ್ ನೆಟ್‌ವರ್ಕ್‌ಗಳು ಮತ್ತು ಎಲ್ಲಾ ಡಿಜಿಟಲ್ ಮಾಧ್ಯಮಗಳು ಮತದಾನದ ಮೊದಲ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳ ಪ್ರಸಾರ ಮಾಡದಂತೆ ಕ್ರಮಕೈಗೊಳ್ಳಬೇಕು. ಅಭಿಪ್ರಾಯ ಸಂಗ್ರಹದ ಫಲಿತಾಂಶಗಳ ಪ್ರದರ್ಶನ ಮತ್ತು ಪ್ರಮಾಣಿತ ಚರ್ಚೆಗಳು, ವಿಶ್ಲೇಷಣೆ, ದೃಶ್ಯಗಳು ಮತ್ತು ಧ್ವನಿ ಬ್ಲೆಟ್‌ಗಳನ್ನು ಒಳಗೊಂಡಿರುತ್ತದೆ. ರಾಜ್ಯದಲ್ಲಿ ಮತದಾನ ಪ್ರಾರಂಭವಾದಾಗಿನಿಂದ ಮತ್ತು ಮತದಾನ ಮುಗಿದ ಅರ್ಧ ಗಂಟೆಯ ಅವಧಿಯಲ್ಲಿ ಎಕ್ಸಿಟ್ ಪೋಲ್ ನಡೆಸುವುದನ್ನು ಮತ್ತು ಅವುಗಳ ಫಲಿತಾಂಶಗಳನ್ನು ಪ್ರಸಾರ ಮಾಡುವುದನ್ನು ಕೂಡ ನಿಷೇಧಿಸಲಾಗಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು