Kornersite

Crime Just In National

Accident: ಸೇತುವೆ ಮೇಲಿಂದ ಬಿದ್ದ ಬಸ್ 14 ಜನ ಬಲಿ, 20 ಜನರ ಸ್ಥಿತಿ ಗಂಭೀರ!

Bhopal : ಸೇತುವೆ (Bridge) ಮೇಲಿಂದ ಬಸ್ ವೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ 14 ಜನ ಸಾವನ್ನಪ್ಪಿ, 20ಕ್ಕೂ ಅಧಿಕ ಜನ (Passengers)ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ (Madhya Pradesh) ಖಾರ್ಗೋನ್‍ನಲ್ಲಿ ನಡೆದಿದೆ.

ಈ ಬಸ್ ಇಂದೋರ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸೇತುವೆಯಿಂದ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಅಪಘಾತದ ಸಮಯದಲ್ಲಿ ಬಸ್‍ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ವರ್ಮಾ ಅಪಘಾತ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ವೇಳೆ ಮೃತಪಟ್ಟವರ ಕುಟುಂಬಸ್ಥರಿಗೆ ಮಧ್ಯಪ್ರದೇಶ ಸರ್ಕಾರವು 2 ಲಕ್ಷ ರೂ. ಪರಿಹಾರ ಘೋಷಿಸಿದೆ.

ತೀವ್ರವಾಗಿ ಗಾಯಗೊಂಡವರಿಗೆ ವೈದ್ಯಕೀಯ ನೆರವು ನೀಡಲು ರಾಜ್ಯ ಸರ್ಕಾರ 50 ಸಾವಿರ ಹಾಗೂ ಗಾಯಗೊಂಡವರಿಗೆ 25 ಸಾವಿರ ರೂ. ನೀಡಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ