Kornersite

Bengaluru Just In Karnataka Politics State

ಮತದಾನ ಮಾಡಿದವರಿಗೆ ಬಿಸಿ ಬಿಸಿ ದೋಸೆ, ಮೈಸೂರ್ ಪಾಕ್, ಜ್ಯೂಸ್ ನೀಡುತ್ತಿರುವ ಹೊಟೇಲ್!

Bangalore : ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಸರ್ಕಾರವು ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಸದ್ಯ ನಗರದಲ್ಲಿನ ನಿಸರ್ಗ ಗ್ರ್ಯಾಂಡ್ ಹೊಟೇಲ್ ನಲ್ಲಿ ಮತ ಹಾಕಿದವರಿಗೆ ಉಚಿತ ಆಹಾರ ನೀಡುತ್ತಿದೆ.

ಮತ ಹಾಕಿದ ಗುರುತನ್ನು ತೋರಿಸಿದರೆ ಸಾಕು ಉಚಿತವಾಗಿ ಬಿಸಿ ಬಿಸಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ಜ್ಯೂಸ್ ನ್ನು ನೀಡುತ್ತಿದೆ. ಶಾಯಿಯನ್ನು ತೋರಿಸುವವರಿಗೆ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ಜ್ಯೂಸ್ ಅನ್ನು ಉಚಿತವಾಗಿ ನೀಡುತ್ತಿದೆ. ಮತದಾನದ ಶೇಕಡಾ ಪ್ರಮಾಣ ಹೆಚ್ಚಿಸುವುದಕ್ಕಾಗಿ ಹಾಗೂ ದೇಶದ ಪ್ರಜಾಪ್ರಭುತ್ವದಲ್ಲಿ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯ ಹಮ್ಮಿಕೊಂಡಿದೆ ಎನ್ನಲಾಗುತ್ತಿದೆ.

ಹೀಗಾಗಿ ಮತದಾನ ಮಾಡಿ ಇದುವರೆಗೂ ಸುಮಾರು 3 ಸಾವಿರ ಜನರು ತಿಂಡಿ ಸೇವಿಸಿದ್ದಾರೆ ಎಂದು ನಿಸರ್ಗ ಗ್ರ್ಯಾಂಡ್ ಹೋಟೆಲ್ನ ಮಾಲೀಕ ಕೃಷ್ಣ ರಾಜ್ ಹೇಳಿದ್ದಾರೆ. ಮತದಾನ ಮಾಡಿ ಬಂದವರಿಗೆ ಉಚಿತವಾಗಿ ಉಪಾಹಾರ ನೀಡಲು ಮುಂದಾಗಿದ್ದ ಬೆಂಗಳೂರಿನ ಎರಡು ಹೋಟೆಲ್ಗಳ ನಿರ್ಧಾರಕ್ಕೆ ಬಿಬಿಎಂಪಿ ನಿರ್ಬಂಧ ವಿಧಿಸಿದ್ದಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಬಿಬಿಎಂಪಿ ಕ್ರಮದ ವಿರುದ್ಧ ಹೋಟೆಲ್ ಮಾಲೀಕರ ಸಂಘಟನೆ ಹೈಕೋರ್ಟ್ ಮೊರೆ ಹೋಗಿತ್ತು. ಹೈಕೋರ್ಟ್ ಈ ನಿರ್ಧಾರವನ್ನು ಪುರಸ್ಕರಿಸಿದೆ. ಹೀಗಾಗಿ ಜನರು ಮತ ಹಾಕಿ, ಉಚಿತ ತಿಂಡಿ ಸವಿಯುತ್ತಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು