
ಟಿಟಿ ಹಾಗೂ ಕಾರು ಡಿಕ್ಕಿ ಕೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಟು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. ಇನ್ನು ಟಿಟಿ ವಾಹನದಲ್ಲಿದ್ದ ಕೇರಳ ಮೂಲದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗೊಂಡಿದ್ದಾರೆ.

ಈ ಅಪಘಾತ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ನಡೆದಿದ್ದು, ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊನ್ನಾವರದಿಂದ ಸ್ಸಂಬಂಧಿಕರ ಮದುವೆಗೆ ಗಿರಿಧರ್ ಕುಟುಂಬ ತೆರಳುವಾಗ ಘಟನೆ ನಡೆದಿದ್ದು, ಕೇರಳದಿಂದ ಚಿಕ್ಕಮಗಳೂರಿಗೆ ಟಿಟಿ ವಾಹನ ಪ್ರವಾಸಕ್ಕೆಂದು ಬರುತ್ತಿತ್ತು.

ಗಂಭೀರವಾಗಿ ಗಾಯಗೊಂಡ ಕೇರಳ ಮೂಲದ 7 ಪ್ರವಾಸಿಗರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

