Kornersite

Bengaluru Just In Karnataka Politics State

ಸರ್ಕಾರ ರಚನೆಯಾದ ಮೇಲೆ ಮಹಿಳೆಯರಿಗೆ 2 ಸಾವಿರ, ಉಚಿತ ವಿದ್ಯೂತ್ ಕೊಡುತ್ತಾ ಕಾಂಗ್ರೆಸ್?

ಕಾಂಗ್ರೆಸ್ ಚುನಾವಣೆಗೂ ಮುನ್ನ ಹಲವು ಯೋಜನೆಗಳನ್ನು ಘೋಷಣೆ ಮಾಡಿದೆ. ಸರ್ಕಾರ ರಚನೆಯಾದ ಮೇಲೆ ಈ ಎಲ್ಲ್ ಯೋಜನೆಗಳನ್ನ್ ಪೂರ್ಣಗೊಳಿಸುತ್ತಾ ಅನ್ನೋದು ಮತದಾರರ ಮುಂದಿರುವ ಪ್ರಶ್ನೇ. ಹಾಗಾದ್ರೆ ಕಾಂದ್ರೆ ಯಾವೆಲ್ಲ ಯೋಜನೆಗಳನ್ನ ಪೂರ್ಣಗೊಳಿಸೋದಾಗಿ ಹೇಳಿತ್ತು ಬನ್ನಿ ನೋಡೋಣ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆ ಮತ್ತೆ ಜಾರಿಗೆ ತರಲಿದೆ.

ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಉಚಿತವಾಗಿ ಸಿಗಲಿದೆ. ಈ ಯೋಜನೆ ಮತ್ತೆ ಜಾರಿಗೆ ತರಲಾಗುವುದು ಎಂದು ಹೇಳಿದೆ.

ಅಲ್ಪಸಂಖ್ಯಾತರಿಗೆ ಒಬಿಸಿ 2ಬಿ ಬರ್ಗದಡಿ ಶೇ 4ರಷ್ಟು ಮೀಸಲಾತಿ ಪುನಹ ಸಿಗಲಿದೆ.

ಗೃಹಲಕ್ಷ್ಮೀ ಯೋಜನೆ ಮೂಲಕ ಕರ್ನಾಟಕದ ಪ್ರತಿಯೊಂದು ಮನೆಯ ಯಜಮಾನಿಗೆ 2 ಸಾವಿರ ಸಹಾಯಧನ ಸಿಗಲಿದೆ.

ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯೂತ್ ಒದಗಿಸಲಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ವೇತನ 11,500 ರೂ ದಿಂದ 15,000 ರೂ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಆಶಾ ಕಾರ್ಯಕರ್ತೆಯರ ವೇತನ 10 ಸಾವಿರ ರೂಪಾಯಿಗೆ ಏರಿಕೆ ಮತ್ತು ವಿಶ್ರಾಂತಿ ವೇತನ 2ಲಕ್ಷ ರೂ ನೀಡುವುದಾಗಿ ಹೇಳಿದೆ.

ಹಾಲಿನ ಸಬ್ಸಿಡಿ ಪ್ರತಿ ಲೀಟರ್ ಗೆ 5ರಿಂದ 7 ರೂಗೆ ಹೆಚ್ಚಳ.

ಜಾನುವಾರು ಖರೀದಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂವರೆಗೆ ಸಾಲ

ರಾಜ್ಯದಲ್ಲಿ ಎಲ್ಲ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್ ಪಾಸ್ ಪ್ರಯಾಣ ಸೌಲಭ್ಯ.

ಪ್ರತಿ ಜಿಲ್ಲೆಯಲ್ಲಿ ಶಿತಲೀಕರಣ ಸ್ಥಾಪನೆ

ಬಿಜೆಪಿ ತಂದಿರುವ ಕೃಷಿ ಕಾಯ್ದೆಗಳು ರದ್ದು

ಎಪಿಎಂಸಿ ಕಾಯ್ದೆ ರದ್ದು

ರೈತರ ಮೇಲಿನ ಎಲ್ಲಾ ಕೇಸ್ ವಾಪಸ್

ಪ್ರತಿ ಜಿಲ್ಲೆಗೆ ಒಂದು ರೈತ ಮಾಲ್ ಆರಂಭ

ಸಾವಯವ ಕೃಷಿ ಯೋಜನೆಗೆ 2500 ಕೋಟಿ ಹೂಡಿಕೆ

ಪತ್ರಕರ್ತರ ಕ್ಷೇಮಾಭಿವೃದ್ದಿ ಸ್ಥಾಪನೆ

ಜೇನು ಸಾಕಾಣಿಕೆಗೆ 50 ಕೋಟಿ

ಹೀಗೆ ಇನ್ನು ಕೆಲವು ಯೋಜನೆಗಳು ಕಾರ್ಯಾರೂಪಕ್ಕೆ ತರುವುದಾಗಿ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನರಿಗೆ ಭರವಸೆ ನೋಡಿದೆ. ಈ ಎಲ್ಲ ಯೋಜನೆಗಳು ಸಾಕಾರಗೊಳ್ಳುತ್ತಾ ಅನ್ನೋದನ್ನ ಕಾದು ನೋಡಬೇಕು

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು