Kornersite

Bengaluru Just In Karnataka Politics State

PM Modi: ರಾಜ್ಯ ಕಾಂಗ್ರೆಸ್ ಗೆ ಶುಭಾಶಯ ತಿಳಿಸಿದ ಪ್ರಧಾನಿ! ಬಿಜೆಪಿ ಸೋಲಿನ ಬಗ್ಗೆ ಸೊಲ್ಲೆ ಇಲ್ಲ!

NewDelhi : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯ ತಿಳಿಸಿದ್ದಾರೆ.

ಕಾಂಗ್ರೆಸ್ (Congress) ನಾಯಕರಿಗೆ ಪ್ರಧಾನಿ ಶುಭ ಹಾರೈಸಿದ್ದು, ಅತ್ಯುತ್ತಮ ಆಡಳಿತ ನೀಡುವಂತೆ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕ ವಿಧಾನಸಭಾ (Assembly Election 2023) ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಅವರು ಈಡೇರಿಸಲಿ. ಅವರಿಗೆ ಹಾರೈಸುತ್ತೇನೆ’ ಎಂದು ಹೇಳಿದಾರೆ. ಆದರೆ, ಬಿಜೆಪಿ ಸೋಲಿನ ಬಗ್ಗೆ ಪ್ರಧಾನಿ ಒಂದಕ್ಷರ ಕೂಡ ಬರೆಯದೇ ಇರುವುದು ಅಚ್ಚರಿ ತಂದಿದೆ.

ಬಿಜೆಪಿ ನಾಯಕರು ಮತ್ತು ಸ್ವತಃ ರಾಜ್ಯದ ಬಿಜೆಪಿ ಅಧ್ಯಕ್ಷರು ಸೋಲಿನ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಸೋಲಿನ ಬಗ್ಗೆ ವಿಮರ್ಶೆ ಮಾಡಿಕೊಂಡು, ಮುಂದಿನ ಲೋಕಸಭೆ ಚುನಾವಣೆಗೆ ತಯಾರಿ ಆಗುವುದಾಗಿ ಮಾತನಾಡಿದ್ದಾರೆ. ಅಲ್ಲದೇ, ಜನರ ಆದೇಶ ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು