ಈಜಲು ತೆರಳಿದ್ದ ಐವರು ಬಾಲಕರು ನೀರು ಪಾಲಾಗಿರುವ ಘಟನೆ ಗುಜರಾತ್(Gujarat) ನಲ್ಲಿ ನಡೆದಿದೆ. ಈಜುತ್ತಿದ್ದ ಸಂದರ್ಭದಲ್ಲಿ ಓರ್ವ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ಅವನನ್ನು ರಕ್ಷಿಸಲು ಹೋಗಿ ಉಳಿದವರು ನೀರು ಪಾಲಾಗಿದ್ದಾರೆ. ಇಬ್ಬರು ಬಾಲಕರು ಕೃಷ್ಣ ಸಾಗರ ಕೆರೆಯಲ್ಲಿ ಮಧ್ಯಾಹ್ನ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರೆಲ್ಲರೂ 16 ರಿಂದ 17 ವರ್ಷದೊಳಗಿನವರು ಎಂದು ಗುರುತಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ. ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, 45 ನಿಮಿಷಗಳ ರಕ್ಷಣಾ ಕಾರ್ಯಾಚರಣೆಯ ನಂತರ ಐದು ಮೃತದೇಹಗಳನ್ನು ಹೊರತೆಗೆಯಲಾಯಿತು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.