Kornersite

Crime Entertainment Just In

Kerala Story: ಗೆಲುವಿನಲ್ಲಿ ಮುನ್ನುಗ್ಗುತ್ತಿದ್ದ ‘ದಿ ಕೇರಳ ಸ್ಟೋರಿ’ ತಂಡಕ್ಕೆ ದೊಡ್ಡ ಶಾಕ್!

ವಿರೋಧದ ಮಧ್ಯೆಯೂ ಭರ್ಜರಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ (The Kerala Story) ಸಂಭ್ರಮದ ಮಧ್ಯೆ ಆಘಾತ ಎದುರಾಗಿದೆ. ಚಿತ್ರದ ಸಕ್ಸಸ್ ನಲ್ಲಿದ್ದ ಚಿತ್ರತಂಡ ಪ್ರಯಾಣ ಮಾಡುತ್ತಿದ್ದು, ಈ ಸಂದರ್ಭದಲ್ಲಿ ರಸ್ತೆ ಅಪಘಾತವಾಗಿ ನಿರ್ದೇಶಕ ಸುದೀಪ್ರೋ ಸೇನ್ (Sudeepro Sen) ಹಾಗೂ ನಾಯಕಿ ಅದಾ ಶರ್ಮಾ(Adah Sharma) ಗಾಯಗೊಂಡಿದ್ದು, ಆಸ್ಪತ್ರೆಗೆ (Hospital)ದಾಖಲಾಗಿದ್ದಾರೆ.

ಮುಂಬಯಿನ ಖಾಸಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ನಿರ್ದೇಶಕ ಹಾಗೂ ನಟಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಅಪಘಾತವನ್ನು ಬೇರೆ ಬೇರೆ ರೀತಿಯಲ್ಲಿ ಅರ್ಥೈಸಲಾಗುತ್ತಿದ್ದು, ನಾನಾ ಗೊಂದಲಗಳನ್ನು ಮೂಡಿಸಿದೆ. ಇದೊಂದು ಪೂರ್ವ ನಿಯೋಜಿತ ಅಪಘಾತ ಎಂದು ಕೆಲವರು ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದಕ್ಕೆ ಸ್ವತಃ ನಿರ್ದೇಶಕರೇ ಬ್ರೇಕ್ ನೀಡಿದ್ದಾರೆ. ಗಾಬರಿ ಪಡುವಂಥದ್ದು ಏನೂ ಆಗಿಲ್ಲ. ನಾವೆಲ್ಲರೂ ಚೆನ್ನಾಗಿದ್ದೇವೆ. ನಿಮ್ಮ ಕಾಳಜಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ನಿರ್ದೇಶಕರು ಹೇಳಿದ ಮಾತಿಗೂ, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿಗೂ ಹೊಂದಾಣಿಕೆ ಆಗದೇ ಇರುವ ಕಾರಣದಿಂದಾಗಿ ಇನ್ನೂ ಅಭಿಮಾನಿಗಳು ಆತಂಕದಲ್ಲೇ ಇದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,