Kornersite

Just In National

ಆಂಬುಲೆನ್ಸ್ ಗೆ ನೀಡಲು ಹಣ ಇಲ್ಲದ್ದಕ್ಕೆ ಮಗುವಿನ ಶವವನ್ನು ಬ್ಯಾಗ್ ನಲ್ಲಿಟ್ಟು 200 ಕಿ.ಮೀ ಸಾಗಿದ ತಂದೆ!

ಅಂಬುಲೆನ್ಸ್‌ಗೆ (Ambulance) ಬಾಡಿಗೆ ನೀಡಲು ಹಣ (Money) ಇಲ್ಲದ ಕಾರಣ ತಂದೆಯೊಬ್ಬ 5 ತಿಂಗಳ ಮಗುವಿನ ಶವವನ್ನು ಬ್ಯಾಗ್ ನಲ್ಲಿಟ್ಟುಕೊಂಡುಂ ಬಸ್‍ ನಲ್ಲಿ ಸಂಚರಿಸಿದ ಮನಕಲಕುವ ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.

ಅಲ್ಲಿಯ ಸಿಲಿಗುರಿಯಲ್ಲಿ ಈ ಘಟನೆ ನಡೆದಿದೆ. ಸಿಲಿಗುರಿಯ ಆಸ್ಪತ್ರೆಯೊಂದರಲ್ಲಿ ಆಶಿಮ್ ದೇಬ್ಶರ್ಮಾ ಎಂಬ ವ್ಯಕ್ತಿ ತನ್ನ 5 ತಿಂಗಳ ಮಗುವನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು 6 ದಿನದಿಂದ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದ್ದು, ಈ ಸಂದರ್ಭದಲ್ಲಿ ಚಿಕಿತ್ಸೆಗಾಗಿ 16 ಸಾವಿರ ರೂ. ಖರ್ಚಾಗಿತ್ತು.

ಸಿಲಿಗುರಿಯಿಂದ 200 ಕಿ.ಮೀ ದೂರದಲ್ಲಿರುವ ಕಲಿಯಗಂಜ್ ಎಂಬಲ್ಲಿ ಆಶಿಮ್ ದೇಬ್ಶರ್ಮಾ ವಾಸಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಗುವಿನ ಶವವನ್ನು ತನ್ನೂರಿಗೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದ. ಆದರೆ ಅಂಬುಲೆನ್ಸ್‍ನ ಡ್ರೈವರ್ 8 ಸಾವಿರ ಕೇಳಿದ್ದಕ್ಕೆ ಹಣ ನೀಡಲು ಕಷ್ಟವಾಗಿ 5 ತಿಂಗಳ ಮಗುವಿನ ಶವವನ್ನು ಬ್ಯಾಗ್‍ನಲ್ಲಿ ಕಟ್ಟಿಕೊಂಡು 200 ಕಿಮೀವರೆಗೆ ಬಸ್‍ನಲ್ಲಿ ಪ್ರಯಾಣಿಸಿದ್ದಾನೆ. ಘಟನೆಗೆ ಸಂಬಂಧಿಸಿ ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿಜೆಪಿಯ (BJP) ಸುವೇಂದು ಅಧಿಕಾರಿ (Suvendu Adhikari) ತೀವ್ರ ಬೇಸರ ವ್ಯಕ್ತಪಡಿಸಿ, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ