Kornersite

Crime Just In Karnataka State

ಪ್ರೀತಿಸಿ, ದೈಹಿಕ ಸಂಬಂಧ ಬೆಳೆಸಿ ಕೈ ಕೊಟ್ಟ ಪ್ರಿಯತಮ; ಮನೆ ಎದುರು ಧರಣಿ ನಡೆಸಿದ ಪ್ರೇಮಿ!

ಪ್ರೀತಿಸಿದ ಯುವಕ ಕೈ ಕೊಟ್ಟಿದ್ದಾನೆಂದು ಆರೋಪಿಸಿ, ಹಾವೇರಿಯ ಯುವತಿಯೋರ್ವಳು ಯುವಕನ ಮನೆಯ ಮುಂದೆ ಧರಣಿ ನಡೆಸಿರುವ ಘಟನೆ ನಡೆದಿದೆ.

ಈ ಘಟನೆ ಕಾರವಾರದ ಮುಂಡಗೋಡ ತಾಲ್ಲೂಕಿನ ಮೈನಳ್ಳಿಯಲ್ಲಿ ನಡೆದಿದೆ. ಪ್ರಕಾಶ್ ಕಲಾಲ್ ಬದಶಂಕರ್ (Prakash Kalal Badashankar) ಎಂಬ ಯುವಕ ಮೋಸ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಅಲ್ಲದೇ, ಯುವತಿ ಮೌನವಾಗಿಯೇ ಪ್ರತಿಭಟನೆ ನಡೆಸಿದ್ದಾಳೆ. ಹಾವೇರಿಯ ರಾಣೆಬೆನ್ನೂರಿನಲ್ಲಿ ಇಬ್ಬರೂ ಯಾವುದೇ ಕೋರ್ಸ್ ಗೆ ಸೇರಿದ್ದ ಸಂದರ್ಭದಲ್ಲಿ ಇಬ್ಬರ ಮಧ್ಯೆ ಸ್ನೇಹ ಬೆಸೆದು, ಅದು ಪ್ರೀತಿಯಾಗಿ ಬದಲಾಗಿತ್ತು. ನಂತರ ಇಬ್ಬರೂ ಬೆಂಗಳೂರಿಗೆ ಹೋಗಿ ಸುತ್ತಾಡಿದ್ದಾರೆ. ಅವರ ನಡುವೆ ದೈಹಿಕ ಸಂಬಂಧವೇರ್ಪಟ್ಟಿದೆ. ನಂತರ ಯುವತಿ ಮದುವೆ ಪ್ರಸ್ತಾಪ ಮಾಡಿದಾಗ, ಪ್ರಕಾಶ್, ನಿನ್ನೊಂದಿಗೆ ಟೈಂಪಾಸ್ ಮಾಡಿದ್ದು ಅನ್ನುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎನ್ನುತ್ತಿರುವ ಯುವತಿ, ಮೌನ ಪ್ರತಿಭಟನೆ ನಡೆಸಿದ್ದಾಳೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ