ಬೆಂಗಳೂರು : ಕಾಂಗ್ರೆಸ್ ನಲ್ಲಿ ಈಗಾಗಲೇ ಸಿಎಂ ಕುರ್ಚಿಯ ಫೈಟ್ ಅಂತ್ಯವಾಗಿದೆ. ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹಣಕಾಸು ಖಾತೆ ನೀಡಬೇಕೆಂದೂ ಪಟ್ಟು ಹಿಡಿದಿದ್ದರು. ಆದರೆ, ಇದಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ ಎನ್ನಲಾಗಿದೆ.
ಸಿದ್ದರಾಮಯ್ಯನವರಿಗೆ (Siddaramaiah) ಸಿಎಂ ಹುದ್ದೆ ಸಿಕ್ಕಿದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ತಮಗೆ ಹಣಕಾಸು ಖಾತೆ (Ministry of Finance) ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದರು. ಆದರೆ ಸಿದ್ದರಾಮಯ್ಯ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಎನ್ನಲಾಗಿದ್ದು, ಬೇರೆ ಯಾವುದೇ ಖಾತೆ ನೀಡಿ, ಆದರೆ ಹಣಕಾಸು ಖಾತೆಯನ್ನು ನಾನೇ ಇಟ್ಟುಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಡಿಕೆಶಿಗೆ ಎರಡು ಪ್ರಬಲ ಖಾತೆ ನೀಡಲಾಗಿದೆ.
ಡಿಕೆಶಿಗೆ ಬೆಂಗಳೂರು ಅಭಿವೃದ್ಧಿ ಹಾಗೂ ಜಲಸಂಪನ್ಮೂಲ ಖಾತೆಯನ್ನು ನೀಡಲು ಹೈಕಮಾಂಡ್ ಅನುಮತಿ ನೀಡಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಡಿಕೆಶಿ ಇಂಧನ ಖಾತೆಯನ್ನು ಹೊಂದಿದ್ದರೆ ಎಂಬಿ ಪಾಟೀಲ್ ಜಲಸಂಪನ್ಮೂಲ ಖಾತೆಯ ಸಚಿವರಾಗಿದ್ದರು.

