Kornersite

Just In National Politics

ಭಯೋತ್ಪಾದನೆಯಿಂದ ಮುಕ್ತವಾದ ವಾತಾವರಣ ಸೃಷ್ಟಿಯಾಗಬೇಕು

ಟೋಕಿಯೊ: ಭಾರತವು ನೆರೆಯ ಪಾಕಿಸ್ತಾನದೊಂದಿಗೆ (Pakistan) ಸಾಮಾನ್ಯ ಸಂಬಂಧ ಬಯಸುತ್ತದೆ. ಆದರೆ, ಆದರೆ ಭಯೋತ್ಪಾದನೆಯಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಇಸ್ಲಾಮಾಬಾದ್‌ನ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣ ಸೃಷ್ಟಿಸುವುದು ಅವರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದು ಹೇಳಿದ್ದಾರೆ.

ಉಕ್ರೇನ್‌ನ ಮೇಲಿನ ಆಕ್ರಮಣಕ್ಕಾಗಿ ದೀರ್ಘಕಾಲದ ಮಿಲಿಟರಿ ಪಾಲುದಾರ ರಷ್ಯಾವನ್ನು ಭಾರತ ಸ್ಪಷ್ಟವಾಗಿ ಖಂಡಿಸಿಲ್ಲ. ಮೋದಿ ಪದೇ ಪದೇ ಶಾಂತಿಗಾಗಿ ಕರೆ ನೀಡುತ್ತಿರುವಾಗ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮುಂದೆಯೇ ಇಂದಿನ ಯುಗ ಯುದ್ಧದ ಯುಗವಲ್ಲ ಎಂದು ಹೇಳಿದ್ದರೂ ಭಾರತವು ರಷ್ಯಾದೊಂದಿಗೆ ಚುರುಕಾದ ವ್ಯವಹಾರವನ್ನು ಮುಂದುವರೆಸಿದೆ. ಭಾರತವು ಮಧ್ಯವರ್ತಿ ಪಾತ್ರವನ್ನು ವಹಿಸಬಹುದೇ ಎಂಬ ಪ್ರಶ್ನೆಗೆ, ಉಕ್ರೇನ್ ಸಂಘರ್ಷದ ಬಗ್ಗೆ ತಮ್ಮ ದೇಶದ ನಿಲುವು ಸ್ಪಷ್ಟ ಮತ್ತು ಅಚಲವಾಗಿದೆ ಎಂದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು