Kornersite

Bengaluru Just In Karnataka Politics State

ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ? ಸಚಿವ ಸ್ಥಾನದ ಆಯ್ಕೆಯ ಕಗ್ಗಂಟು!

Bangalore : ಈಗಾಗಲೇ ಸಿಎಂ ಹಾಗೂ ಡಿಸಿಎಂ ಆಯ್ಕೆಯ ಕಸರತ್ತು ಮುಗಿದಿದೆ. ಇದರ ಬೆನ್ನಲ್ಲಿಯೇ ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದೆ. ಹೀಗಾಗಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ.

ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಯಲಿದ್ದು, ಸಂಪುಟ (Cabinet) ರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ನಡೆಯುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಜೊತೆ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬೆಲ್ಲ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಸಿಎಂ ಗಾದಿಗಾಗಿ ದೆಹಲಿಯಲ್ಲಿ ಭಾರೀ ಹೈಡ್ರಾಮ ನಡೆದಿತ್ತು. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಕೊನೆಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಡಿಕೆಶಿ ಒಪ್ಪಿಗೆ ಸೂಚಿಸಿದರು. ತಾವು ಡಿಸಿಎಂ ಪಟ್ಟ ಪಡೆದರು. ಮೇ 20 ರಂದು ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕರು ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು