Kornersite

Entertainment Just In

ಅಮೃತವರ್ಷಿಣಿ ಶರತ್ ಬಾಬು ಇನ್ನಿಲ್ಲ; ಅನಾರೋಗ್ಯದಿಂದ ಸಾವನ್ನಪ್ಪಿದ ನಟ!

ಅಮೃತವರ್ಷಿಣಿ’ (Amruthavarshini) ಚಿತ್ರದ ಹಿರಿಯ ನಟ ಶರತ್ ಬಾಬು (Sarath Babu) ನಿಧನರಾಗಿದ್ದಾರೆ. ಮೇ 22ರಂದು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಟ ಸಾವನ್ನಪ್ಪಿದ್ದಾರೆ.

ನಟ ಶರತ್ ಬಾಬು (Sarath Babu) ಏಪ್ರಿಲ್ ಮೊದಲ ವಾರದಲ್ಲಿಯೇ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆರೋಗ್ಯದಲ್ಲಿ ಚೇತರಿಕೆ ಕಂಡು ಬಾರದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಬಹು ಅಂಗಾಂಗ ವೈಫಲ್ಯದಿಂದ ಶರತ್ ಬಾಬು ಅವರು ಬಳಲುತ್ತಿದ್ದರು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ನಟ ಶರತ್ ಇಹಲೋಕ ತ್ಯಜಿಸಿದ್ದಾರೆ. ಐಸಿಯು ವಾರ್ಡ್‌ನಲ್ಲಿಟ್ಟು ಸೂಕ್ತ ಚಿಕಿತ್ಸೆ ನೀಡಿದರೂ ಅವರನ್ನು ಉಳಿಸಿಕೊಳ್ಳಲು ಆಗಿಲ್ಲ.

ನಾಲ್ಕು ದಶಕಗಳ ಕಾಲ ಚಿತ್ರೋದ್ಯಮದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ಶರತ್ ಬಾಬು, ಹುಟ್ಟಿದ್ದು ಆಂಧ್ರಪ್ರದೇಶದಲ್ಲಿ. ಆದರೂ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ‘ಅಮೃತವರ್ಷಿಣಿ’ ಶರತ್ ಬಾಬು ಎಂದೇ ಫೇಮಸ್ ಆಗಿದ್ದರು. 200ಕ್ಕೂ ಅಧಿಕ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಶಕ್ತಿ, ಕಂಪನ, ರಣಚಂಡಿ, ತುಳಸಿದಳ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಗಣ್ಯರು ಅವರ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ