Kornersite

Crime Just In National

Crime News: ಸಂಬಂಧಿಕರಿಂದಲೇ ಇಬ್ಬರು ಅಪ್ರಾಪ್ತರು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

ಒಂದೇ ಕುಟುಂಬದ ನಾಲ್ವರನ್ನು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಘಟನೆ ಒಡಿಶಾದ ಬರ್ಬಢದಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಸೋದರ ಸಂಬಂಧಿಗಳೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಮೃತರನ್ನು ಗುರುದೇವ್ ಬಾಗ್, ಅವರ ಪತ್ನಿ ಸಿಬಗ್ರಿ ಬಾಗ್, ಅವರ ಮಗ ಚೂಡಾಮಣಿ (15) ಮತ್ತು ಮಗಳು ಶ್ರಾವಣಿ (10) ಎಂದು ಗುರುತಿಸಲಾಗಿದೆ.

ಆರೋಪಿಗಳು ಸಂತ್ರಸ್ಥರ ಮನೆಗೆ ನುಗ್ಗಿ ತಮ್ಮ ಸೋದರಳಿಯ, ಸೊಸೆ ಮತ್ತು ಅವರ ಮಗ ಮತ್ತು ಮಗಳಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಅಲ್ಲಿನ ಎಸ್ ಡಿಪಿಓ ಅಮಿತ್ ಕುಮಾರ್ ಪಾಂಡಾ ಹೇಳಿದ್ದಾರೆ. ಎಲ್ಲರನ್ನೂ ಕೊಲೆ ಮಾಡಿದ ನಂತರ ಆರೋಪಿ ಪಾರ್ಬತಿ ಬಾಗ್ ಎಂಬಾತನೇ ವಿಷಯವನ್ನು ಊರಿನಲ್ಲಿ ತಿಳಿಸಿದ್ದಾನೆ. ಸ್ಥಳೀಯರು ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಎರಡು ಕುಟುಂಬ ವರ್ಗದವರ ನಡುವೆ ಇದ್ದ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎಲ್ಲರನ್ನೂ ಹತ್ಯೆ ಮಾಡಿರುವುದಾಗಿ ಆರೋಪಿ ಹೇಳಿಕೊಂಡಿದ್ದಾನೆ. ದಿನಗಳಿಂದ ನನ್ನ ಪತಿ ಚಾಕು ಹಿಡಿದುಕೊಂಡು ಓಡಾಡುತ್ತಿದ್ದರು. ಅವರು ಕೊಲೆ ಬೆದರಿಕೆ ಹಾಕಿದ್ದರು. ಹೀಗಾಗಿ ಸಿಟ್ಟಿನಲ್ಲಿ ಕೊಲೆ ಮಾಡಿದ್ದಾನೆ ಎಂದು ಆರೋಪಿಯ ಪತ್ನಿ ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ