Bangalore : ಚುನಾವಣೆಯಲ್ಲಿ (Election) ರಾಮನಗರ (Ramanagara)ದಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜ್ಯ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯದಲ್ಲಿ ಪಕ್ಷದಿಂದ ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಇನ್ನೂ ದೊಡ್ಡ ಪ್ರಮಾಣದಲ್ಲಿ ಆಗಬೇಕು. ಸೋಲಿನಿಂದ ನಾನು ಕಂಗೆಟ್ಟಿಲ್ಲ. ಇನ್ನೂ ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ. ಸೋಲೇ ಅಂತಿಮವಲ್ಲ. ಸೋತಿದ್ದರೂ ಪಕ್ಷದಿಂದ ದೂರ ಇರದೆ ಪಕ್ಷ ಬೆಳೆಸಲು ದುಡಿಯುತ್ತೇನೆ. ಪಕ್ಷ ಮರು ನಿರ್ಮಾಣ ಆಗಬೇಕು. ಅದಕ್ಕಾಗಿಯೇ ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರು ವಿದಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಕಾಂಗ್ರೆಸ್ (Congress) ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ಸೋಲು ಕಂಡಿದ್ದರು. ಇಕ್ಬಾಲ್ ಹುಸೇನ್ 87,690 ಮತಗಳನ್ನು ಪಡೆದಿದ್ದರೆ, ಜೆಡಿಎಸ್ (JDS) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 76,975 ಮತಗಳನ್ನು ಪಡೆದು ಸೋಲು ಕಂಡಿದ್ದರು. ಬಿಜೆಪಿ (BJP) ಅಭ್ಯರ್ಥಿ ಗೌತಮ್ ಗೌಡ 12,912 ಮತ ಪಡೆದಿದ್ದರು.