Kornersite

Bengaluru Just In Karnataka Politics State

Siddu Cabinet: ನೂತನ ಸಚಿವರಿಗೆ ಖಾತೆ ಹಂಚಿಕೆ ಕಾರ್ಯ ಅಂತಿಮ; ಯಾರಿಗೆ ಯಾವ ಖಾತೆ?

ಬೆಂಗಳೂರು : ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟದ ಸಚಿವರಿಗೆ ಖಾತೆಗಳು ಕೊನೆಗೂ ಅಧಿಕೃತವಾಗಿವೆ (Cabinet). ಸಿಎಂ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅಂಕಿತ ಹಾಕಿದ ಕೂಡಲೇ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ (Ramalingareddy) ಗೆ ಸಾರಿಗೆ ಖಾತೆಯೊಂದಿಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆ ನೀಡಲಾಗಿದೆ. ಸಮಾಜ ಕಲ್ಯಾಣ ಅಥವಾ ಕಂದಾಯ ಕುರಿತು ಒಲವು ಹೊಂದಿದ್ದರೆನ್ನಲಾದ ಕೆ.ಹೆಚ್ ಮುನಿಯಪ್ಪಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಜೊತೆಗೆ ಗ್ರಾಹಕ ವ್ಯವಹಾರಗಳ ಖಾತೆಯನ್ನು ಹಂಚಿಕೆ ಮಾಡಲಾಗಿದೆ.
ಡಿಸಿಎಂ ಡಿಕೆಶಿಗೆ ಬೆಂಗಳೂರು ನಗರ ಅಭಿವೃದ್ಧಿ, ಜಲಸಂಪನ್ಮೂಲ, ಆರ್.ಬಿ.ತಿಮ್ಮಾಪುರ ಬಳಿ ಇದ್ದ ಮುಜರಾಯಿ ಖಾತೆ ರಾಮಲಿಂಗಾ ರೆಡ್ಡಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಎಂ.ಬಿ. ಪಾಟೀಲ್‍ಗೆ ಹೆಚ್ಚುವರಿ ಆಗಿ ನೀಡಲಾಗಿದ್ದ ಐಟಿಬಿಟಿ ಸಿಎಂ ಬಳಿಯೇ ಉಳಿಸಿಕೊಂಡಿದ್ದಾರೆ.

.ಸಿ.ಸುಧಾಕರ್ ಗೆ ಉನ್ನತ ಶಿಕ್ಷಣ ಖಾತೆ ನೀಡಲಾಗಿದೆ. ಮೊದಲು ವೈದ್ಯಕೀಯ ಶಿಕ್ಷಣ ನೀಡಲಾಗಿತ್ತು. ಶರಣ ಪ್ರಕಾಶ್ ಪಾಟೀಲ್‍ಗೆ ವೈದ್ಯಕೀಯ ಶಿಕ್ಷಣ ನೀಡಲಾಗಿದೆ. ಮೊದಲು ಇವರಿಗೆ ಉನ್ನತ ಶಿಕ್ಷಣ ಖಾತೆ ನೀಡಲಾಗಿತ್ತು ಎರಡು ಖಾತೆಯನ್ನ ಇಬ್ಬರಿಗೆ ಅದಲು ಬದಲು ಮಾಡಲಾಗಿದೆ.

ಯಾರಿಗೆ ಯಾವ ಖಾತೆ..?:

  • ಸಿದ್ದರಾಮಯ್ಯ – ಹಣಕಾಸು, ಸಂಪುಟ ವ್ಯವಹಾರ, ಡಿಪಿಎಆರ್, ಗುಪ್ತಚರ, ವಾರ್ತಾ ಇಲಾಖೆ, ಐಟಿಬಿಟಿ
  • ಡಿಕೆಶಿ – ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿ
  • ಪರಮೇಶ್ವರ್ – ಗೃಹ ಇಲಾಖೆ
  • ಹೆಚ್.ಕೆ.ಪಾಟೀಲ್ – ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ
  • ಕೆ.ಎಚ್.ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು
  • ಕೆ.ಜೆ.ಜಾರ್ಜ್ – ಇಂಧನ
  • ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕಾ
  • ರಾಮಲಿಂಗಾರೆಡ್ಡಿ – ಸಾರಿಗೆ-ಮುಜರಾಯಿ
  • ಸತೀಶ್ ಜಾರಕಿಹೊಳಿ – ಲೋಕೋಪಯೋಗಿ ಇಲಾಖೆ
  • ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
  • ಜಮೀರ್ ಅಹಮದ್ – ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ
  • ಕೃಷ್ಣಬೈರೇಗೌಡ – ಕಂದಾಯ ಇಲಾಖೆ
  • ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
  • ಚಲುವರಾಯಸ್ವಾಮಿ – ಕೃಷಿ ಇಲಾಖೆ
  • ಕೆ. ವೆಂಕಟೇಶ್- ಪಶು ಸಂಗೋಪನೆ, ರೇಷ್ಮೆ
  • ಡಾ.ಹೆಚ್.ಸಿ ಮಹದೇವಪ್ಪ – ಸಮಾಜ ಕಲ್ಯಾಣ
  • ಈಶ್ವರ್ ಖಂಡ್ರೆ – ಅರಣ್ಯ ಮತ್ತು ಪರಿಸರ
  • ಕೆ.ಎನ್.ರಾಜಣ್ಣ – ಸಹಕಾರ
  • ಶರಣಬಸಪ್ಪ ದರ್ಶನಾಪುರ್ – ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ
  • ಶಿವಾನಂದ ಪಾಟೀಲ್ – ಜವಳಿ, ಸಕ್ಕರೆ, ಕೃಷಿಉತ್ಪನ್ನ ಮಾರುಕಟ್ಟೆ
  • ಆರ್ ಬಿ ತಿಮ್ಮಾಪುರ್ – ಅಬಕಾರಿ
  • ಎಸ್‍ಎಸ್ ಮಲ್ಲಿಕಾರ್ಜುನ್ – ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
  • ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ
  • ಡಾ.ಶರಣಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ ಇಲಾಖೆ
  • ಮಂಕಾಳ ಸುಬ್ಬವೈದ್ಯ – ಮೀನುಗಾರಿಕೆ ಮತ್ತು ಬಂದರು, ಒಳನಾಡು ಸಾರಿಗೆ
  • ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣ
  • ರಹೀಂ ಖಾನ್ – ಪೌರಾಡಳಿತ, ಹಜ್
  • ಡಿ ಸುಧಾಕರ್ – ಮೂಲಸೌಕರ್ಯ, ಯೋಜನೆ ಮತ್ತು ಸಾಂಖ್ಯಿಕ
  • ಬೈರತಿ ಸುರೇಶ್ – ನಗರಾಭಿವೃದ್ಧಿ (ಬೆಂಗಳೂರು ಹೊರತು ಪಡಿಸಿ)
  • ಸಂತೋಷ್ ಲಾಡ್ – ಕಾರ್ಮಿಕ, ಕೌಶಲ್ಯಾಭಿವೃದ್ಧಿ
  • ಎನ್.ಎಸ್.ಬೋಸರಾಜು – ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
  • ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
  • ಡಾ.ಎಂಸಿ ಸುಧಾಕರ್ – ಉನ್ನತ ಶಿಕ್ಷಣ
  • ಬಿ ನಾಗೇಂದ್ರ – ಯುವಜನ ಸೇವೆ, ಕ್ರೀಡೆ, ಮತ್ತು ಕನ್ನಡ ಸಂಸ್ಕೃತಿ ಇಲಾಖೆ

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು