ಬೆಂಗಳೂರು : ಬಿಪಿಎಲ್ ಕಾರ್ಡ್ (BPL Card) ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ಜುಲೈ 1 ರಿಂದ 10 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.
ನಮ್ಮ ಸರ್ಕಾರ 7 ಕೆಜಿ ಕೊಡುತ್ತಿದ್ದೇವೆ. ಈಗ 5 ಕೆಜಿ ನೀಡಲಾಗುತ್ತಿದೆ. ಈಗ ಅಕ್ಕಿ ಸಂಗ್ರಹ ಇಲ್ಲದ ಕಾರಣ ಜುಲೈ 1 ರಿಂದ ಅನ್ನ ಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರು ಇದರ ಫಲಾನುಭವಿಗಳಾಗಲಿದ್ದಾರೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಜನತೆಗೆ ಗ್ಯಾರಂಟಿ ಜಾರಿ ಮಾಡುತ್ತೇವೆ. ಎಲ್ಲ ಜಾತಿ, ಧರ್ಮ, ಭಾಷಿಕರಿಗೂ ಗ್ಯಾರಂಟಿ ಕೊಡುತ್ತೇವೆ.ಅಂತ್ಯೋದಯ ಕಾರ್ಡ್ ಇರುವ ಕುಟುಂಬಕ್ಕೆ 35 ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಈಗ ಈ ಕಾರ್ಡ್ಗೂ ತಲಾ 10 ಕೆಜಿ ನೀಡಲಾಗುತ್ತದೆ.