Kornersite

Bengaluru Just In Karnataka Politics State

ಬಿಪಿಎಲ್ ಹೊಂದಿದ ಪ್ರತಿ ಕುಟಂಬ ಸದಸ್ಯರಿಗೆ 10 ಕೆಜಿ ಅಕ್ಕಿ; ಗ್ಯಾರಂಟಿ ಘೋಷಣೆ!

ಬೆಂಗಳೂರು : ಬಿಪಿಎಲ್‌ ಕಾರ್ಡ್‌ (BPL Card) ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ಜುಲೈ 1 ರಿಂದ 10 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.

ನಮ್ಮ ಸರ್ಕಾರ 7 ಕೆಜಿ ಕೊಡುತ್ತಿದ್ದೇವೆ. ಈಗ 5 ಕೆಜಿ ನೀಡಲಾಗುತ್ತಿದೆ. ಈಗ ಅಕ್ಕಿ ಸಂಗ್ರಹ ಇಲ್ಲದ ಕಾರಣ ಜುಲೈ 1 ರಿಂದ ಅನ್ನ ಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಇದರ ಫಲಾನುಭವಿಗಳಾಗಲಿದ್ದಾರೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಜನತೆಗೆ ಗ್ಯಾರಂಟಿ ಜಾರಿ ಮಾಡುತ್ತೇವೆ. ಎಲ್ಲ ಜಾತಿ, ಧರ್ಮ, ಭಾಷಿಕರಿಗೂ ಗ್ಯಾರಂಟಿ ಕೊಡುತ್ತೇವೆ.ಅಂತ್ಯೋದಯ ಕಾರ್ಡ್ ಇರುವ ಕುಟುಂಬಕ್ಕೆ 35 ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಈಗ ಈ ಕಾರ್ಡ್‌ಗೂ ತಲಾ 10 ಕೆಜಿ ನೀಡಲಾಗುತ್ತದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು