ಜೂನ್ 5ರಿಂದ ಸಂಪೂರ್ಣ ಕನ್ನಡ ಸಿನಿಮಾರಂಗದ ಶೂಟಿಂಗ್ ಬಂದಾಗಲಿದೆ. ಸಿನಿಮಾಗಳ ಹೊರಾಂಗಣ ಚಿತ್ರೀಕರಣಕ್ಕೆ ಬ್ರೇಕ್ ಬೀಳುತ್ತಿದೆ. ಅಸಲಿಗೆ ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೊರಾಂಗಣ ಚಿತ್ರೀಕರಣ ಕಾರ್ಮಿಕರ ಸಂಘ ಬಂದ್ ಗೆ ಕರೆ ನೀಡಿದೆ.
ಹೊರಾಂಗಣ ಚಿತ್ರೀಕರಣ ಕಾರ್ಮಿಕರು ಕಳೆದ ಮೂರು ವರ್ಷಗಳಿಂದ ಬೇಡಿಕೆಯನ್ನ ಹಲವು ಬಾರಿ ಇಟ್ಟಿತ್ತು. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಮಾಪಕರ ಸಂಘಕ್ಕೆ ಮನವಿ ಮಾಡಿತ್ತು. ಆದ್ರೆ ಸಮಸ್ಯೆ ಮಾತ್ರ ಬಗೆಹರಿದಿರಲಿಲ್ಲ. ಹೀಗಾಗಿ ಹೊರಾಂಗಣ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ.
ಪ್ರತಿ ವರ್ಷ 200 ರಿಂದ 300 ಚಿತ್ರಗಳು ಬಿಡುಗಡೆಯಾಗುತ್ತಿವೆ. ಸರ್ಕಾರ 125 ಚಿತ್ರಗಳಿಗೆ ಸಬ್ಸಿಡಿ ಕೊಡುತ್ತಿದೆ. ಈ ಸಬ್ಸಿಡಿ ಸಿಗಬೇಕಾದ್ರೆ ಹೊರಾಂಗಣ ಚಿತ್ರೀಕರಣ ಸರಬರಾಜು ಮಾಡುವ ಮಾಲೀಕರ ಸಹಿ ಬೇಕೇ ಬೇಕು. ಆದ್ರೆ ಹೀಗೆ ಆಗುತ್ತಿಲ್ಲವೆಂದು ಹೊರಾಂಗಣ ಚಿತ್ರೀಕರಣ ಘಟಕದ ಅಧ್ಯಕ್ಷ ಎ ಎಚ್ ಭಟ್ ಅವರು ಆರೋಪಿಸಿದ್ದಾರೆ.