Kornersite

Bengaluru Just In Karnataka State

Rain Update: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶುರುವಾದ ಮಳೆರಾಯನ ಆರ್ಭಟ; ರೈತರಲ್ಲಿ ಹರ್ಷ!

ಉಡುಪಿ : ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಪ್ರವೇಶ ಮಾಡಿರುವ ಲಕ್ಷಣಗಳು ಗೋಚರಿಸಿದ್ದು, ಉಡುಪಿ (Udupi Rain) ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ.

ಜಿಲ್ಲೆಯ ಕುಂದಾಪುರ, ಬೈಂದೂರು, ಉಡುಪಿ ತಾಲೂಕಿನ ಹಲವು ಪ್ರದೇಶಗಳಲ್ಲಿ ಭರ್ಜರಿ ಮಳೆಯಾಗಿದೆ. ಈಗಾಗಲೇ ಹವಾಮಾನ ಇಲಾಖೆ (Weather Department)ಯು ಮಳೆ ಮುನ್ಸೂಚನೆ ನೀಡಿದೆ. ರಾತ್ರಿ ಗುಡುಗು ಸಹಿತ ಸುಮಾರು ಅರ್ಧ ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ವ್ಯಾಪಕ ಬಿಸಿಲಿನಿಂದ ಕೂಡಿದ್ದ ವಾತಾವರಣ ಈಗ ತಂಪಾಗಿದೆ.

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ 35 ಮಿಲಿ ಮೀಟರ್ ನಷ್ಟು ಮಳೆ ಬಿದ್ದಿದೆ. ಕಾರ್ಕಳ ಕಾಪು ತಾಲೂಕಿನ ಕೆಲವೆಡೆ ಮಳೆಯಾಗಿದೆ. ಅಲ್ಲದೇ, ಇಂದು ಉಡುಪಿ ಜಿಲ್ಲೆಯಲ್ಲೆ ಯೊಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದ್ದು, ಮಳೆಯಾಗುವ ನಿರೀಕ್ಷೆ ಇದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ