Kornersite

Crime Just In State

ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ

ಕಣ್ಣೂರು (ಕೇರಳ): ಕೇರಳದ ಕಣ್ಣೂರಿಗೆ ಸಮೀಪದ ಮುಜಪ್ಪಿಲಂಗಾಡ್ ನಲ್ಲಿ ಭಾನುವಾರ ಸಾಯಂಕಾಲ ಬೀದಿ ನಾಯಿಗಳು ಬಾಲಕನ ಮೇಲೆ ಅಟ್ಯಾಕ್ ಮಾಡಿದ್ದಾವೆ. ಪರಿಣಾಮ 11 ವರ್ಷದ ವಿಶೇಷ ಚೇತನ ಬಾಲಕ ಆಸ್ಪತೆಯಲ್ಲಿ ಮೃತಪಟ್ಟಿದ್ದಾನೆ.

ಕೆಟ್ಟಿನಕಂ ನಿವಾಸಿ ನಿಹಾಲ್ ಎನ್ನುವವನು ಮನೆಯಿಂದ 300 ಮೀಟರ್ ದೂರದಲ್ಲಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಮ್ಡು ಹೋದರೂ ಕೂಡ ಪ್ರಯೋಜನವಾಗಲಿಲ್ಲ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಅಸಲಿಗೆ ನಿಹಾಲ್ ಆಟಿಸಂನಿಂದ ಬಳಲುತ್ತಿದ್ದ. ಮನೆಯ ಬಳಿಯೇ ಓಡಾಡಿಕೊಂಡು ಇದ್ದವನು ಸಡನ್ ಆಗಿ ಕಾಣಲಿಲ್ಲ. ಎಲ್ಲರೂ ಹುಡುಕಾಟ ನಡೆಸಿದ್ದಾರೆ. ಪೊಲೀಸರಿಗೂ ವಿಷಯ ತಿಳಿಸಿದ್ದಾರೆ. ಪೊಲೀಸರು ಕೂಡ ಹುಡುಕಾಟ ನಡೆಸಿದ್ದಾರೆ. ಆದ್ರೆ ಬಾಲಕ ರಾತ್ರಿ 8.30ರ ಸುಮಾರಿಗೆ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಈ ಘಟನೆ ಕುರಿತು ಸಾರ್ವಜನಿಕರು ಟೀಕೆ ಮಾಡಿದ್ದಾರೆ. ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅದನ್ನು ತಡೆಯಲಿ ಕೇರಳ ಸರ್ಕಾರ ವಿಫಲವಾಗಿದೆ ಎಂದು ಆರೋಪ ಮಾಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ