ಮಕ್ಕಳ ಭವಿಷ್ಯ ರೂಪಿಸಬೇಕಿದ್ದ ಶಿಕ್ಷಕನೊಬ್ಬ ಮಕ್ಕಳಿಂದ ಮನೆ ಕೆಲಸ ಮಾಡಿಸಿದ್ದಾನೆ. ಅಷ್ಟೇ ಅಲ್ಲ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆ ನಡೆದಿರೋದು ಬಳ್ಳಾರಿ ಜಿಲ್ಲೆಯ ಯಲ್ಲಾಪುರದಲ್ಲಿ. ಯಲ್ಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶಾಸ್ತ್ರಿ ಕೃಷ್ಣಮೂರ್ತಿ ಎನ್ನುವವನೇ ಈ ಕೃತ್ಯ ಏಸಗಿದ್ದು.
ನಾಲ್ಕೈದು ವರ್ಷಗಳ ಹಿಂದೆಯಷ್ಟೇ ಶಿಕ್ಷಕನಾಗಿ ನೇಮಕಗೊಂಡಿದ್ದ. ಈತನ ಕಿತಾಪತಿ ಒಂದೆರಡಲ್ಲ ಬಿಡಿ. ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದನಂತೆ. ಮನೆ ಪಾಟದ ನೆಪ ಮಾಡಿಕೊಂಡು ವಿದ್ಯಾರ್ಥಿನಿಯರನ್ನು ಮೆನೆಗೆ ಕರೆಸಿಕೊಳ್ಳುತ್ತಿದ್ದನಂತೆ. ವಿದ್ಯಾರ್ಥಿಗಳ ಬಳಿ ಮನೆಕೆಲಸ ಮಾಡಿಸಿಕೊಂಡ ದೂರಿನ ಮೇರೆಗೆ ಇದೀಗ ಶಿಕ್ಷಣ ಇಲಾಖೆ ಪರಮನೆಂಟ್ ಆಗಿ ಗೇಟ್ ಪಾಸ್ ಕೊಟ್ಟಿದೆ.
ಯಲ್ಲಾಪುರದಲ್ಲಿ ಮನೆಮಾಡಿಕೊಂಡಿದ್ದ ಈ ಶಿಕ್ಷಕನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದ್ರೆ ಪತ್ನಿ ಮನೆಯಲ್ಲಿ ಇಲ್ಲದ ವೇಳೆ ಶಾಲಾ ಮಕ್ಕಳನ್ನು ಮನೆಗೆ ಕರೆಸಿಕೊಂಡು ಮನೆ ಕೆಲಸ ಮಾಡಿಸಿಕೊಂಡು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದನಂತೆ. ಈ ವಿಚಾರ ಗೊತ್ತಾದ ಮಕ್ಕಳ ಪೋಷಕರು ಎಸ್ ಡಿಎಂ ಬಳಿ ಹೋಗಿ ದೂರು ನೀಡಿದ್ದಾರೆ. ವಿದ್ಯಾರ್ಥಿಗಳ ದೂರಿನ ಮೇರೆಗೆ ಶಿಕ್ಷಣ ಇಲಾಖೆ ಕೃಷ್ಣಮೂರ್ತಿಯನ್ನು ಅಮಾನತು ಮಾಡಿದೆ. ಆದರೆ ತನ್ನ ಮೇಲೆ ಆರೋಪ ಕೇಳಿ ಬರುತ್ತಿದ್ದಂತೆ ಕೃಷ್ಣಮೂರ್ತಿ ಕಾಲಿಗೆ ಬುದ್ದಿ ಹೇಳಿದ್ದಾನೆ.