Kornersite

Crime Just In Karnataka State

ಅಕ್ಕ-ಭಾವನ ಕಿರುಕುಳ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಚಾಮರಾಜನಗರ: ಅಕ್ಕ-ಭಾವನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಪಟ್ಟವರು ಮಹದೇವಸ್ವಾಮಿ(48), ಸವಿತಾ(40), ಸಿಂಚನಾ(13) ಎಂದು ಗುರುತಿಸಲಾಗಿದೆ. ಶುಕ್ರವಾರದಂದ ಪಕ್ಕದ ಮನೆಯವರು ಮಹದೇವಸ್ವಾಮಿ ಅವರ ಮನೆಗೆ ಹೋದಾಗ ಮೂವರು ಮನೆಯಲ್ಲಿಯೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಅಕ್ಕ-ಭಾವ ಹಾಗೂ ಇವರ ಕುಟುಂಬದ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಡೆತ್ ನೋಟ್ ಪತ್ತೆ:

ಸಾಯೋದಕ್ಕು ಮುನ್ನ ಮೃತರು ಡೆತ್ ನೋಟ್ ಬರೆದಿಟ್ತಿದ್ದರು. ಈ ಡೆತ್ ನೋಟ್ ನಲ್ಲಿ ತಮ್ಮ ಅಕ್ಕ ಭಾವನೇ ಆತ್ಮಹತ್ಯೆಗೆ ಕಾರಣ ಎಂದು ಬರೆದಿದ್ದಾರೆ. ಅಕ್ಕ ಮಂಜುಳಾ ಹಾಗೂ ಭಾವ ಮಲ್ಲೆಶ್ ಗೆ ಆ ತಾಯಿ ದೇವಿರಮ್ಮ ಶಿಕ್ಷೆ ಕೊಡಬೇಕು ಎಂದು ಮಹದೇವಸ್ವಾಮಿ ಬರೆದಿದ್ದಾರೆ. ನಮ್ಮ ಆಸ್ತಿಯನ್ನು ಯಾವ ಕಾರಣಕ್ಕೂ ಇವರಿಗೆ ನೀಡಬೇಡಿ ಎಂದು ಬರೆದಿದ್ದಾರೆ.

ಸ್ಥಳಕ್ಕೆ ಬಂದ ಚಾಮರಾಜನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ