ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಡಹಗಲೇ ವಿದ್ಯಾರ್ಥಿಯ ಮೇಲೆ ಲಾಂಗ್ ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಎರಡು ಬೈಕ್ ಮೇಲೆ ಬಂದ ಆರು ಜನರು ನಾಗರಬಾವಿಯ ಕೆಎಲ್ಇ ಕಾಲೇಜಿನ ವಿದ್ಯಾರ್ಥಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ.
21 ವರ್ಷ ದರ್ಶನ್ ಬಿಬಿಎ ಪ್ರಥಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿದ್ದ. ಜೂನ್ 5 ರಂದು ಕಾಲೇಜಿನ ಮುಂದೆ ಸ್ನೇಹಿತರೊಂದಿಗೆ ದರ್ಶನ್ ನಿಂತ ಸಂದರ್ಭದಲ್ಲಿ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಲಾಂಗ್ ಉಲ್ಟಾ ಹಿಡಿದು ದರ್ಶನ್ ಬೆನ್ನಿನ ಮೇಲೆ ಹಲ್ಲೆ ಮಾಡಿದ್ದಾರೆ. ಕಾಲೇಜು ಸುತ್ತಲೂ ಹವಾ ಕ್ರಿಯೇಟ್ ಮಾಡಲು ಈ ಹಲ್ಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳೀಯರ ಯುವಕರಿಂದಲೇ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ದರ್ಶನ್ ಕಾಣುತ್ತಿದ್ದಂತೆ ಇವನೇ ಬಿಡಬೇಡಿ, ಹೊಡಿ, ಸಾಯಿಸಿ ಎಂಂದು ಕೂಗುತ್ತಾ ಹಲ್ಲೆ ಮಾಡಿದ್ದಾರೆ. ಸದ್ಯ ದರ್ಶನ್ ಪ್ರಾಣಾಪಾಯದಿಂದ ಪಾರಾಗಿದ್ದು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

