Kornersite

Bengaluru Just In Karnataka Lifestyle State

Job Alert: ಕೆಪಿಎಸ್ ಸಿಯಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಗ್ರಾಮ ಪಂಚಾಯ್ತಿ ಸರ್ಕಾರಿ ಹುದ್ದೆಗಳಿಗೆ ಸೇರಬೇಕೆನ್ನುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್‌-1, ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್‌-2, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಲು ಸರ್ಕಾರದಿಂದ ಅಂತಿಮ ಆದೇಶ ಹೊರ ಬಿದ್ದಿದೆ. ಸರ್ಕಾರವು ಈ ಆದೇಶವನ್ನು ಜುಲೈ 15 ರಂದು ಹೊರಡಿಸಿದ್ದು, ಮುಂದಿನ ಆಗಷ್ಟ್ ತಿಂಗಳ ಅಂತ್ಯದೊಳಗೆ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವೃಂದದ ನೇರ ನೇಮಕಾತಿ ಕೋಟಾದಲ್ಲಿ ಪ್ರಸ್ತುತ 385 ಹುದ್ದೆಗಳು ಖಾಲಿ ಇದ್ದು, ಈ ಪೈಕಿ 150 ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಅಧಿಸೂಚನೆ ಸಾಧ್ಯತೆ ಇದೆ. ಇನ್ನುಳಿದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ : 660, ಪಂಚಾಯತ್ ಕಾರ್ಯದರ್ಶಿ ಗ್ರೇಡ್‌-1: 604, ಪಂಚಾಯತ್ ಕಾರ್ಯದರ್ಶಿ ಗ್ರೇಡ್‌-2: 729 ಸೇರಿದಂತೆ ಎಸ್‌ಡಿಎ : 345 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಎಸ್‌ ಡಿಎ, ಕಾರ್ಯದರ್ಶಿ ಹುದ್ದೆಗಳಿಗೆ ಪಿಯುಸಿ ಪಾಸ್‌ ಮಾಡಿರಬೇಕು. ಅರ್ಜಿ ಸಲ್ಲಿಸುವ ಕೊನೆ ದಿನಾಂಕದೊಳಗೆ ಪಾಸ್‌ ಮಾಡಿದ್ದರೆ ಮಾತ್ರ ಅರ್ಜಿಗೆ ಅವಕಾಶ ಇರುತ್ತದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ