Kornersite

Just In Karnataka State

Mother Love: ತಾಯಿಗೆ ಶಾಕ್ ನೀಡಿದ ಮಗ

ಉಡುಪಿ : ಮಗನೊಬ್ಬ ಮೂರು ವರ್ಷಗಳ ನಂತರ ತಾಯ್ನಾಡಿಗೆ ಬಂದು ತಾಯಿಗೆ ಶಾಕ್ ನೀಡಿದ್ದು, ತಾಯಿಯ ಸಂತಸಕ್ಕೆ ಸಾಟಿಯೇ ಇಲ್ಲದಂತಾಗಿತ್ತು.

ಮೂರು ವರ್ಷಗಳ ನಂತರ ವಿದೇಶದಿಂದ ಸ್ವದೇಶಕ್ಕೆ ಮರಳಿದ್ದ ಯುವಕನೊಬ್ಬ ತಾನು ಬರುವುದನ್ನು ತಾಯಿಗೆ ಹೇಳಿರಲಿಲ್ಲ. ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ಶಾಕ್ ನೀಡುವ ನಿಟ್ಟಿನಲ್ಲಿ ಈತ ಬಂದಿದ್ದ.

ಗಂಗೊಳ್ಳಿ ನಿವಾಸಿ ರೋಹಿತ್ ಎಂಬಾತನೇ ದುಬೈನಿಂದ ತಾಯ್ನಾಡಿಗೆ ಮರಳಿದ್ದರು. ಮನೆಯವರಿಗೆ, ಮನೆಗೆ ತೆರಳಿ ನೋಡಿದಾಗ ಮನೆಯವರೆಲ್ಲ ರೋಹಿತ್ ನನ್ನು ಎದುರುಗೊಂಡಿದ್ದಾರೆ. ಆದರೆ, ತಾಯಿ ಮಾತ್ರ ಮನೆಯಲ್ಲಿ ಇರಲಿಲ್ಲ. ಬೇಸರಗೊಂಡಿದ್ದ ರೋಹಿತ್, ನೇರವಾಗಿ ಗಂಗೊಳ್ಳಿ ಬಂದರು ಬಳಿ ತಾಯಿ ಮೀನು ಮಾರುವ ಸ್ಥಳಕ್ಕೆ ಹೋಗಿದ್ದಾರೆ.

ತಾಯಿ ಮೀನು ಮಾರುವ ಸ್ಥಳಕ್ಕೆ ಅಪರಿಚಿತರಂತೆ ನಾಟಕವಾಡಲು ಮುಖವನ್ನು ಕರವಸ್ತ್ರದಿಂದ ಮುಚ್ಚಿ ಜೊತೆಗೆ ಕೂಲಿಂಗ್ ಗ್ಲಾಸ್ ಧರಿಸಿ ಮೀನು ಖರೀದಿಸಲು ಗ್ರಾಹಕರಂತೆ ಹೋಗಿದ್ದಾರೆ. ಮಗನ ಧ್ವನಿ ಕೇಳುತ್ತಿದ್ದಂತೆ ತನ್ನ ಕರುಳಿನ ಕುಡಿ ಎಂದು ತಿಳಿದಿದ್ದು, ತಕ್ಷಣ ತನ್ನ ಮಗನನ್ನು ಬಿಗಿದಪ್ಪಿ ಆನಂದ ಭಾಷ್ಪ ಹರಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ