Kornersite

Bengaluru Just In Karnataka State

ಶ್ರಾವಣ, ಗಣೇಶ ಹಬ್ಬಕ್ಕೆ ಮಾಂಸ ಬಿಟ್ಟವರಿಗೆ ಬಿಗ್ ಶಾಕ್!

ಶ್ರಾವಣ ಮಾಸ ಹಾಗೂ ಗಣೇಶ ಚತುರ್ಥಿ ಮುಗಿಯುತ್ತಿದ್ದಂತೆ ಚಿಕನ್ ಹಾಗೂ ಮಟನ್ ಪ್ರಿಯರ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ. ಹೀಗಾಗಿ ದರದಲ್ಲಿ ಕೂಡ ಏರಿಕೆಯಾಗಿದೆ.

ಉತ್ಪಾದನೆ ವೆಚ್ಚ ಏರಿಕೆಯಾದ ಹಿನ್ನೆಲೆಯಲ್ಲಿ ಲೈವ್‌ ಕೋಳಿ ಕೆ.ಜಿ.ಗೆ 95 ರೂ. ನಿಂದ 110 ರೂ.ಗೆ ಏರಿಕೆ ಕಂಡಿದೆ. ಅಲ್ಲದೇ, ಇನ್ನೂ ಹಲವೆಡೆ ಗಣೇಶನ ಉತ್ಸವ ಮುಗಿಯದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ದರದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಶ್ರಾವಣ ಮಾಸದಲ್ಲಿ ಬಹುತೇಕರು ಮಾಂಸಾಹಾರ ಸೇವಿಸುವುದಿಲ್ಲ. ಕೆಲವೆಡೆ ಗಣೇಶನನ್ನು ಕೂರಿಸಿದ್ದರೆ, ಅದರ ವಿಸರ್ಜನೆಯಾಗುವವರೆಗೆ ಮಾಂಸಾಹಾರ ಸೇವಿಸುವುದಿಲ್ಲ. ಹೀಗಾಗಿ, ಮುಂದಿನ ವಾರದ ನಂತರ ಮಾಂಸಕ್ಕೆ ಮತ್ತಷ್ಟು ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ.
ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಕೋಳಿ ಸಾಕಾಣಿಕೆ ಪ್ರಮಾಣ ಕೊಂಚ ಇಳಿಕೆಯಾಗಿತ್ತು. ಇದೀಗ ಮತ್ತೆ ಕೋಳಿಗಳ ಸಾಕಣೆ ಹೆಚ್ಚಾಗಲಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ