Kornersite

Crime Just In Karnataka State

ಡಿಜೆ ಸೌಂಡ್ ಗೆ 19 ದಿನದ ಹಸುಗೂಸು ಬಲಿ?

ರಾಯಚೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿಜೆ (DJ sound) ಸೌಂಡ್ ಗೆ ಹಸುಗೂಸೊಂದು ಬಲಿಯಾಗಿರುವ ಘಟನೆ ವರದಿಯಾಗಿದೆ.

19 ದಿನದ ಮಗು ಡಿಜೆ ಸದ್ದಿಗೆ ಸಾವನ್ನಪ್ಪಿದೆ ಎನ್ನಲಾಗಿದ್ದು, ಸೆಪ್ಟೆಂಬರ್ 27ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸುರೇಶ್ ಬಾಬು, ಸುಮತಿ ದಂಪತಿಯ ಹೆಣ್ಣು ಮಗು ಮೃತಪಟ್ಟಿದ್ದು, ಅತಿಯಾದ ಡಿಜೆ ಸೌಂಡ್ನಿಂದ ಸಾವನ್ನಪ್ಪಿದೆ ಎಂದು ಪಾಲಕರು ಶಂಕಿಸಿ, ಆರೋಪಿಸಿದ್ದಾರೆ.

ಕಳೆದ 19 ದಿನಗಳ ಹಿಂದೆ ಜನಿಸಿದ್ದ ಮಗು ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು. ಸೆ.27ರ ರಾತ್ರಿ ಮಗುವಿಗೆ ಹಾಲುಣಿಸಿ ತಾಯಿ ಸುಮತಿ ಮಲಗಿಸಿದ್ದರು. ಆದರೆ, ಡಿಜೆ ಸೌಂಡ್ನಿಂದ ಹೃದಯದ ಸಮಸ್ಯೆಯಾಗಿ ಸಾವನ್ನಪ್ಪಿದೆ ಎಂದು ಆರೋಪಿಸಿದ್ದಾರೆ. ಮೃತ ಮಗುವಿನ ಅಜ್ಜ ಜಿ.ಟಿ. ರೆಡ್ಡಿ ಅವರು ವಕೀಲರಾಗಿದ್ದು ನಗರದ ಮಡ್ಡಿಪೇಟೆಯಲ್ಲಿ ವಾಸವಾಗಿದ್ದಾರೆ. ಇವರು ತಮ್ಮ ಮಗಳ ಸುಮತಿಯನ್ನ ಹೆರಿಗೆಗೆ ಕರೆತಂದಿದ್ದರು. 19 ದಿನಗಳ ಹಿಂದಷ್ಟೆ ಹೆಣ್ಣುಮಗು ಜನಿಸಿತ್ತು. ಅತಿಯಾದ ಶಬ್ಧದಿಂದಲೇ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ, ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ