Kornersite

Bollywood Entertainment Just In Karnataka

Breaking News: ಬಾಲಿವುಡ್ ನಟ ಸಂಜಯ್ ದತ್ ಗೆ ಗಂಭೀರ ಗಾಯ-ಸಂಜುಬಾಬಾ ಸ್ಪಷ್ಟನೆಯ ಮೆಸೆಜ್ ನೋಡಿ

Bollywood : ನಟ ಸಂಜಯ್ ದತ್ (Sanjay Dutt) ಅವರು ಈಗ ಚಂದನವನದಲ್ಲಿ ಅಬ್ಬರಿಸುತ್ತಿದ್ದಾರೆ. ಕನ್ನಡದ ಕೆಡಿ (KD) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಸಾಹಸ ದೃಶ್ಯ ಚಿತ್ರೀಕರಣ ಮಾಡುತ್ತಿದ್ದ ಸಂದರ್ಭದಲ್ಲಿ ಅವರಿಗೆ ಗಂಭೀರ ಗಾಯಗಳಾಗಿವೆ. ಈ ಬಗ್ಗೆ ಸಂಜುಬಾಬಾ ಸ್ಪಷ್ಟನೆಯ ಮೆಸೆಜ್ ನ್ನ ಹೀಗೆ ಬರೆದು ಪೋಸ್ಟ್ ಮಾಡಿದ್ದಾರೆ.


ಸಾಹಸ ಸನ್ನಿವೇಶದಲ್ಲಿ ಬಾಂಬ್ ಬ್ಲಾಸ್ಟಿಂಗ್ (Bomb Blasting) ಮಾಡುವ ಸಂದರ್ಭದಲ್ಲಿ ಸಂಜಯ್ ದತ್ ಗೆ ಗಾಯಗಳಾಗಿವೆ ಎನ್ನಲಾಗಿದೆ. ಜೋಗಿ ಪ್ರೇಮ್ (Jogi Prem), ಧ್ರವ ಸರ್ಜಾ (Dhruva Sarja) ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ಕೆಡಿ ಚಿತ್ರದಲ್ಲಿ ಸಂಜಯ್ ನಟಿಸಿದ್ದಾರೆ.


ಚಿತ್ರದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವ ಸನ್ನಿವೇಶವಿದ್ದು, ಚಿತ್ರೀಕರಣ ಮಾಡುವಾಗ ಸಂಜಯ್ ದತ್ ಅವರ ಮೊಣಕೈ ಹಾಗೂ ಮುಖಕ್ಕೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಕೆಡಿ ಚಿತ್ರದ ಚಿತ್ರೀಕರಣವು ಮಾಗಡಿ ರೋಡ್ ನಲ್ಲಿ ಹಾಕಲಾದ ಸೆಟ್ ನಲ್ಲಿ ನಡೆಯುತ್ತಿದೆ.
ಸದ್ಯ ಈ ಘಟನೆ ನಡೆಯುತ್ತಿದ್ದಂತೆ ಚಿತ್ರ ಶೂಟಿಂಗ್ ನ್ನು ನಿಲ್ಲಿಸಲಾಗಿದೆ ಎನ್ನವು ಮಾಹಿತಿ ಸಿಕ್ಕಿದೆ. ಸಂಜಯ್ ದತ್ ಹಾಗೂ ನಟ ಧ್ರುವ ಸರ್ಜಾ ನಡುವೆ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆಯುತ್ತಿತ್ತು. ಈ ಸಾಹಸಮಯ ದೃಶ್ಯವನ್ನು ಸೆರೆ ಹಿಡಿಯುತ್ತಿದ್ದಾಗ ಈ ಅವಘಡನ ನಡೆದಿದೆ. ಘಟನೆಯ ನಂತರ ಸಂಜಯ್ ದತ್ ಮುಂಬಯಿಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.


ಸಂಜಯ್ ದತ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ಮೊದಲನೇ ಸಿನಿಮಾ ಇದಾಗಿದ್ದು, ಸಂಜಯ್ ಅವರ ಕನ್ನಡದ ಎರಡನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನ ಮತ್ತೊಬ್ಬ ಕಲಾವಿದರಾದ ಶಿಲ್ಪಾ ಶೆಟ್ಟಿ (Shilpa Shetty)ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,