Kornersite

Bengaluru Just In Karnataka State

Karnataka Assembly Election: ವಿರೋಧಿಗಳು ತಾಯಿಯ ಮನೆಯಿಂದ ಹೊರಗೆ ಹಾಕಿದರು- ರಾಮದಾಸ್!

Mysore : ಕೃಷ್ಣರಾಜ ಕ್ಷೇತ್ರದಿಂದ ಹಾಲಿ ಶಾಸಕ ರಾಮದಾಸ್ ಅವರನ್ನು ಕೈ ಬಿಡಲಾಗಿದೆ. ಹೀಗಾಗಿ ಅವರು ತೀವ್ರ ಸಂಕಟ ವ್ಯಕ್ತಪಡಿಸಿದ್ದಾರೆ.


ಎಸ್‌.ಎ. ರಾಮದಾಸ್‌ಗೆ (SA Ramadas) ಟಿಕೆಟ್ ಕೈತಪ್ಪಿದ್ದು, ಶ್ರೀವತ್ಸ (TS Srivatsa) ಅವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆ ಅಸಮಾಧಾನ ಹೊರಹಾಕಿರುವ ರಾಮದಾಸ್, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ ಎಂದು ಭಾವುಕರಾಗಿ ಮಾತನಾಡಿದ್ದಾರೆ.


ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ (Pratap Simha) ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೆಯೇ ಕಳುಹಿಸಿದ್ದಾರೆ.


30 ವರ್ಷದಿಂದ ಇದ್ದ ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ನಾನು ಇರಬೇಕಾ ಅಥವಾ ಬೇಡವಾ ಎಂಬುವುದನ್ನು ಚರ್ಚಿಸಿ ನಿರ್ಧಾರ ಮಾಡುತ್ತೇನೆ. ನಾನು ಸದ್ಯ ಯಾರನ್ನೂ ಭೇಟಿ ಮಾಡಲ್ಲ ಎಂದ ರಾಮದಾಸ್ ಮನೆಗೆ ಬಂದಿದ್ದ ಶ್ರೀವತ್ಸ ಹಾಗೂ ಪ್ರತಾಪ್ ಸಿಂಹ ಅವರನ್ನು ಭೇಟಿ ಮಾಡದೇ ಮನೆಯ ಮತ್ತೊಂದು ಬಾಗಿಲಿನಿಂದ ಹೊರನಡೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ನಾವು ರಾಮದಾಸ್ ಅವರ ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ