Yadagiri : ಅಭ್ಯರ್ಥಿಯೊಬ್ಬರು ನೀಡಿರುವ ಹಣವನ್ನು ಎಣಿಸಲು ಅಧಿಕಾರಿಗಳೇ ಇಲ್ಲಿ ಸುಸ್ತಾಗಿದ್ದಾರೆ. ಯಾದಗಿರಿ (Yadgiri) ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು ತಮ್ಮ ಠೇವಣಿ (Deposite) ಹಣ 10 ಸಾವಿರ ರೂ.ಗಳನ್ನು ಸಂಪೂರ್ಣವಾಗಿ ಒಂದು ರೂಪಾಯಿ ನಾಣ್ಯಗಳಲ್ಲಿ ಪಾವತಿಸಿದ್ದು, ಎಣಿಸುವಲ್ಲಿ ಅಧಿಕಾರಿಗಳು ಸುಸ್ತಾಗಿ ಹೋಗಿದ್ದಾರೆ.

ಈ ಪಕ್ಷೇತರ ಅಭ್ಯರ್ಥಿ ಹೆಸರು ಯಂಕಪ್ಪ. ಕಳೆದ ಒಂದು ವರ್ಷದಿಂದ ಯಾದಗಿರಿ ವಿಧಾನಸಭಾ ಕ್ಷೇತ್ರದ 10 ಸಾವಿರ ಮನೆಗಳಲ್ಲಿ ಭಿಕ್ಷೆ (Beg) ಬೇಡಿ, ಪ್ರತಿ ಮನೆಯಲ್ಲಿ ಒಂದು ರೂ.ಗಳಂತೆ ಹತ್ತು ಸಾವಿರ ಸಂಗ್ರಹಿಸಿದ್ದಾರೆ. ಒಂದು ವರ್ಷ ಮನೆಬಿಟ್ಟು ಠೇವಣಿ ಸಂಗ್ರಹಿಸಿರುವ ಇವರು, ಯಾವುದೇ ಗ್ರಾಮದಲ್ಲಿ ವಾಸ್ತವ್ಯ ಹೂಡಬೇಕಿದ್ದರೂ ಅಲ್ಲಿನ ದೇವಸ್ಥಾನಗಳಲ್ಲಿಯೇ ಇರುತ್ತಿದ್ದರು. ಅದೇ ಊರಿನ ಮನೆಗಳಲ್ಲಿ ಭಿಕ್ಷೆ ಬೇಡಿ ಊಟವನ್ನೂ ಮಾಡುತ್ತಿದ್ದರು ಎನ್ನಲಾಗಿದೆ.

ಯಂಕಪ್ಪ ತಮ್ಮ ಕೊರಳಿಗೆ ಹಾಕಿಕೊಂಡಿದ್ದ ಪೋಸ್ಟರ್ನಲ್ಲಿ (Poster) 12ನೇ ಶತಮಾನದ ಸಮಾಜ ಸುಧಾರಕರಾದ ಜ್ಞಾನಜ್ಯೋತಿ ಬಸವೇಶ್ವರ, ಸಂತ ಕವಿ ಕನಕದಾಸ, ಸ್ವಾಮಿ ವಿವೇಕಾನಂದ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿತ್ರಗಳು ಮತ್ತು ಸಂವಿಧಾನದ ಪೀಠಿಕೆ ಹಾಕಿಕೊಂಡು ಊರೂರು ಸುತ್ತಾಡಿ ಹಣ ಸಂಗ್ರಹಿಸಿದ್ದಾರೆ. ಕನ್ನಡದಲ್ಲಿ ಕೇವಲ ಒಂದು ರೂಪಾಯಿ ಅಲ್ಲ, ನಿಮ್ಮ ಒಂದು ಮತ, ನೀವು ಒಂದು ದಿನ ನನಗೆ ಮತ (Vote) ನೀಡಿ, ನಾನು ನಿಮಗೆ ಬಡತನದಿಂದ ಮುಕ್ತಿ ನೀಡುತ್ತೇನೆ ಎಂಬ ಘೋಷವಾಕ್ಯದೊಂದಿಗೆ ಚುನಾವಣಾ ಅಖಾಡಕ್ಕೆ ಯಂಕಪ್ಪ ಧುಮುಕಿದ್ದಾರೆ.
ಯಂಕಪ್ಪ, ಕಲಬುರಗಿ (Kalaburagi) ಜಿಲ್ಲೆಯ ಕಲಬುರಗಿ ವಿಶ್ವವಿದ್ಯಾಲಯದಿಂದ (Gulbarga University) ಕಲಾ ಪದವೀಧರರಾಗಿದ್ದಾರೆ. 60 ಸಾವಿರ ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಅವರ ತಂದೆ ದೇವಿಂದ್ರಪ್ಪ ಒಂದು ಎಕರೆ 16 ಗುಂಟೆ ಜಮೀನು ಹೊಂದಿದ್ದಾರೆ ಎಂದು ಆಸ್ತಿಯ ವಿವರ ಘೋಷಿಸಿಕೊಂಡಿದ್ದಾರೆ.