Kornersite

Just In Karnataka State

ಚಿಕುನ್ ಗುನ್ಯಾ; ಎಲ್ಲೆಂದರಲ್ಲಿ ಮಲಗಿದ ಜನರು; ತಿರುಗಿಯೂ ನೋಡದ ಅಧಿಕಾರಿಗಳು!

ಯಾದಗಿರಿ: ಒಂದೇ ಗ್ರಾಮದ 100ಕ್ಕೂ ಅಧಿಕ ಜನರಲ್ಲಿ ಚಿಕುನ್ ಗುನ್ಯಾ ಕಾಣಿಸಿಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಜಿಲ್ಲೆಯ ಹುಣಸಗಿ ತಾಲೂಕಿನ ಬೈಲಾಪುರ ತಾಂಡಾದ ಒಂದೇ ಗ್ರಾಮದಲ್ಲಿ 100ಕ್ಕೂ ಅಧಿಕ ಜನರಲ್ಲಿ ಚಿಕುನ್ ಗುನ್ಯಾ (Chickengunya) ಕಾಣಿಸಿಕೊಂಡಿದೆ.

ಬೈಲಾಪುರ ತಾಂಡಾದ 100ಕ್ಕೂ ಅಧಿಕ ಜನರಿಗೆ ಚಿಕನ್ ಗುನ್ಯಾ ಬಾಧಿಸಿದ್ದು, ಜನರು ಹಾಸಿಗೆ ಹಿಡಿದಿದ್ದಾರೆ. ಬೈಲಾಪುರ ತಾಂಡಾದಲ್ಲಿ 150 ಕುಟುಂಬಗಳಿವೆ. ಅದರಲ್ಲಿ 100ಕ್ಕೂ ಅಧಿಕ ಜನರಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದೆ. ಖಾಯಿಲೆಗೆ ತುತ್ತಾಗಿರುವ ಜನ ನಡೆಯಲಾಗದ ಪರಿಸ್ಥಿತಿಯಲ್ಲಿದ್ದು ಹಾಸಿಗೆ ಹಿಡಿದಿದ್ದಾರೆ.

ಜ್ವರ, ಕೈ-ಕಾಲು ನೋವು, ತಲೆ ನೋವು ಬಾಧಿಸಿದ್ದರಿಂದ ಗ್ರಾಮದ ಮನೆ, ದೇವಾಲಯ, ರಸ್ತೆ ಬಳಿಯೇ ರೋಗಿಗಳು ಮಲಗಿದ್ದಾರೆ. ಕೂಲಿ ಮಾಡಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಇಡೀ ಗ್ರಾಮಕ್ಕೆ ಚಿಕನ್ ಗುನ್ಯಾ ಅಟ್ಯಾಕ್ ಆಗಿರುವುದರಿಂದ ತುತ್ತಿನ ಚೀಲ ತುಂಬಿಸಿಕೊಳ್ಳಲು ಪರಿತಪಿಸುವಂತಾಗಿದೆ.

ನೂರಾರು ಜನ ಖಾಯಿಲೆಯಿಂದ ಹಾಸಿಗೆ ಹಿಡಿದು ತಿಂಗಳುಗಳೇ ಕಳೆದಿದ್ದರೂ ಇದವರೆಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ