Imphal : ಮಣಿಪುರ(Manipur)ದಲ್ಲಿ ಮತ್ತೆ ಘರ್ಷಣೆ ನಡೆದಿದ್ದು, ರಾಜಧಾನಿ ಇಂಫಾಲದಲ್ಲಿ ಮತ್ತೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮಣಿಪುರದಲ್ಲಿ ಹಿಂಸಾಚಾರ ಮೇ 3 ರಿಂದ ಪ್ರಾರಂಭವಾಗಿ ಇಂದಿಗೂ ಜೀವಂತವಾಗಿದೆ. ಹಿಂಸಾಚಾರದಲ್ಲಿ 70ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 26 ಸಾವಿರಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿತ್ತು. ಈಗ ಮೈಟೀಸ್ (Meiteis) ಹಾಗೂ ಕುಕಿ ಜನಾಂಗದ ನಡುವೆ ಅಲ್ಲಿ ಮತ್ತೆ ಘರ್ಷಣೆ ಆರಂಭವಾಗಿದೆ. ರಾಜಧಾನಿ ಇಂಫಾಲನಲ್ಲಿ (Imphal) ಕರ್ಫ್ಯೂ ಜಾರಿಗೊಳಿಸಲಾಗಿದೆ. ಮನೆಗಳಿಗೆ ಬೆಂಕಿ ಹಚ್ಚಿದ ಮೂವರು ಆರೋಪಿಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಲ್ಲದೇ, ಇಂಫಾಲದಲ್ಲಿ ಮೇ 26ರ ವರೆಗೆ ಇಂಟರ್ನೆಟ್ ಬಂದ್ ಮಾಡಲಾಗಿದೆ. ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್, ಎರಡು ಸಮುದಾಯಗಳ ನಡುವಿನ ಉದ್ವಿಗ್ನತೆಯ ಕುರಿತು ಬರುತ್ತಲೇ ಇವೆ. ಮೈಟೈಸ್ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (Manipur High Court) ಸೂಚಿಸಿತ್ತು. ನಂತರ ಪ್ರತಿಭಟನೆ ನಡೆದಿತ್ತು. ಸದ್ಯ ಆ ಘರ್ಷಣೆ ನಡೆಯುತ್ತಿಲ್ಲ. ಈಗ ನಡೆದಿರುವ ಘಟನೆ ಅರಣ್ಯ ಸಂರಕ್ಷಣೆ ಮತ್ತು ಗಸಗಸೆ ತೆರವುಗೊಳಿಸುವ ಸರ್ಕಾರದ ನೀತಿಗೆ ವಿರುದ್ಧವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.