Kornersite

Bengaluru Crime Just In Karnataka State

ರೈಲ್ವೆ ಸಿಬ್ಬಂದಿ, ಪೊಲೀಸರ ನಿರ್ಲಕ್ಷ್ಯದಿಂದ ರೈಲಿನಲ್ಲಿ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ!

ಮಂಡ್ಯ : ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಲ್ಲಿ ಮೂರ್ಛೆ ರೋಗಿಯೊಬ್ಬರು ನರಳಿ ನರಳಿ ಪ್ರಾಣ ಬಿಟ್ಟ ಘಟನೆಯೊಂದು ರೈಲ್ವೆ ಸಿಬ್ಬಂದಿ ಹಾಗೂ ಪೊಲೀಸರ ನಿರ್ಲಕ್ಷ್ಯದಿಂದಾಗಿ ಮೈಸೂರು (Mysuru) ಹಾಗೂ ಮಂಡ್ಯ (Mandya) ನಡುವಿನ ರೈಲು (Train) ಪ್ರಯಾಣದಲ್ಲಿ ನಡೆದಿದೆ.

ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ (83) ಸಾವನ್ನಪ್ಪಿದ ವ್ಯಕ್ತಿ. ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೆಂಜರ್ ರೈಲಿನಲ್ಲಿ ಸ್ವಾಮಿ ಪ್ರಯಾಣಿಸುತ್ತಿದ್ದರು. ಅವರು ರೈಲು ಹತ್ತುತ್ತಿದ್ದಂತೆ ಮೂರ್ಛೆ ಬಂದು ಕುಸಿದು ಬಿದ್ದಿದ್ದಾರೆ. ಸಹ ಪ್ರಯಾಣಿಕರು ಮೈಸೂರಿನಲ್ಲೆ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆದರೆ, ಚಿಕಿತ್ಸೆ ಕೊಡಿಸಲು ಸಿಬ್ಬಂದಿ ಬಂದಿಲ್ಲ. ರೋಗಿಗೆ ಚಿಕಿತ್ಸೆ ನೀಡದೆ, ಮಂಡ್ಯಕ್ಕೆ ಕರೆದುಕೊಂಡು ಬಂದಿದ್ದಾರೆ. ಆದರೆ, ಈ ವ್ಯಕ್ತಿ ಮಂಡ್ಯ ಸಮೀಪ ಬರುತ್ತಿದ್ದಂತೆ ಸ್ವಾಮಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ರೈಲಿನ ಎಲ್ಲ ನಿಲ್ದಾಣದಲ್ಲಿಯೂ ರೈಲ್ವೆ ಪೊಲೀಸರಿಗೂ ತಿಳಿಸಿದರೆ ಚಿಕಿತ್ಸೆ ಕೊಡಿಸಲಿಲ್ಲ ಎಂದು ಸಹ ಪ್ರಯಾಣಿಕರು ಆರೋಪ ಮಾಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ